ETV Bharat / state

ಕೇರಳದಲ್ಲಿ ಯುವಕನ ಕೊಲೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

author img

By

Published : Mar 2, 2021, 5:31 PM IST

Hindu activist protest in Chamarajanagar
ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಕೇರಳದಲ್ಲಿ ಎಸ್​ಡಿಪಿಐ ಮತ್ತು ಆರೆಸ್ಸೆಸ್ ನಡುವೆ​ ಸಂಘರ್ಷ ನಡೆದು ಯುವಕನ ಹತ್ಯೆಯಾಗಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚಾಮರಾಜನಗರ: ಕೇರಳದಲ್ಲಿ ಆರೆಸ್ಸೆಸ್​ ವೇಷಧಾರಿಗಳನ್ನು ಬಂಧಿಸುವ ಅಣಕು ಪ್ರದರ್ಶನ ಹಾಗೂ ಯುವಕನ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಕೊಳದ ಆಂಜನೇಯ ದೇಗುಲದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮಾನವ ಸರಪಳಿ ರಚಿಸಿ ಎಸ್​ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು‌.

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಇದನ್ನೂ ಓದಿ: ಡಿಕೆಶಿ ನೇತೃತ್ವದಲ್ಲಿ ಕೈ ಕಾರ್ಯಕರ್ತೆಯರ ಬೃಹತ್​ ಪ್ರತಿಭಟನಾ ಮೆರವಣಿಗೆ

ಹಿಂದೂ ಸಮಾಜದ ಮೇಲೆ ಈ ಸಂಘಟನೆಗಳ ಕಾರ್ಯಕರ್ತರು ರಾಕ್ಷಸೀ ಕೃತ್ಯ ಎಸಗುತ್ತಿದ್ದಾರೆ. ಹಾಗಾಗಿ ಈ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು. ಕೇರಳದಲ್ಲಿ ನಡೆಯುತ್ತಿರುವ ಜಿಹಾದಿ ಕಾರ್ಯ ನಿಲ್ಲಿಸಬೇಕು. ಇಲ್ಲದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಲಿದೆ ಎಂದು ಎಚ್ಚರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.