ETV Bharat / state

ಸಾರಿಗೆ ನೌಕರರ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ: ಜಿಲ್ಲೆಗಳಲ್ಲಿ ಬಸ್‌ ಸಂಚಾರ ಸುಗಮ, ಸಾರ್ವಜನಿಕರು ನಿರಾಳ

author img

By

Published : Feb 20, 2020, 10:32 AM IST

ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಕೆಎಸ್ಆರ್​​ಟಿಸಿ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ಧಾರವಾಡ, ಚಾಮರಾಜನಗರ ಹಾಗೂ ಕೊಡಗಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ.

sahakara-sarige-protest-against-govt-dot-transportation-employees-strike-unspeakable-support-in-many-districts
ಸಾರಿಗೆ ನೌಕರರ ಮುಷ್ಕರ: ಹಲವು ಜಿಲ್ಲೆಯಲ್ಲಿ ವ್ಯಕ್ತವಾಗದ ಬೆಂಬಲ...

ಧಾರವಾಡ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಂದಿನಂತೆ ಬಸ್ ಸಂಚಾರ ಆರಂಭಗೊಂಡಿದ್ದು, ಸಾರಿಗೆ ನೌಕರರು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸದೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಚಾಮರಾಜನಗರದಲ್ಲೂ ಕೆಎಸ್ಆರ್​​ಟಿಸಿ ನೌಕರರ ಪ್ರತಿಭಟನೆಗೆ ಬೆಂಬಲವಿಲ್ಲ:

ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಒತ್ತಾಯಿಸಿ ಕೆಎಸ್ಆರ್​​ಟಿಸಿ ನೌಕರರು ಕರೆ ನೀಡಿರುವ ಬಂದ್​ಗೆ ನಗರದಲ್ಲಿ ಬೆಂಬಲ ಸಿಕ್ಕಿಲ್ಲ. ಬಸ್ ಸಂಚಾರ ಎಂದಿನಂತೆ ಕಾರ್ಯಾರಂಭಿಸಿದ್ದು ಜಿಲ್ಲೆಯ ನಾಲ್ಕು ಘಟಕದಿಂದ ಬಸ್​ಗಳ ಸಂಚಾರ ಸಾಮಾನ್ಯವಾಗಿದೆ. ಶಿವರಾತ್ರಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಎಂದಿನಂತೆ ವಿಶೇಷ ಬಸ್‌ಗಳು ಸಂಚರಿಸುತ್ತಿದ್ದು ಜಿಲ್ಲೆಯಲ್ಲಿ ಬಂದ್ ವಿಫಲವಾಗಿದೆ.

ಸಾರಿಗೆ ನೌಕರರ ಮುಷ್ಕರ: ಹಲವು ಜಿಲ್ಲೆಯಲ್ಲಿ ವ್ಯಕ್ತವಾಗದ ಬೆಂಬಲ

ಮಂಜಿನ ನಗರಿ ಮಡಿಕೇರಿಗೆ ತಟ್ಟದ ಸಾರಿಗೆ ನೌಕರರ ಬಂದ್ ಬಿಸಿ:

ಬಂದ್ ಬಿಸಿ ಮಂಜಿನ ನಗರಿ ಮಡಿಕೇರಿಯಲ್ಲಿ ಕಾಣಿಸುತ್ತಿಲ್ಲ. ಜಿಲ್ಲೆಯಲ್ಲಿ ಎಂದಿನಂತೆ ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಸಂಚಾರವಿದೆ. ಮಡಿಕೇರಿಯಿಂದ-ಮಂಗಳೂರು, ಮೈಸೂರು ಹಾಗೂ ಹಾಸನ ಕಡೆಗೆ ಬಸ್‌ಗಳು ಸಂಚರಿಸುತ್ತಿದ್ದು ಪ್ರಯಾಣಿಕರು ನಿರಾಳರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.