ETV Bharat / state

ಕೆಎಸ್​ಆರ್​ಟಿಸಿ ಬಸ್-ಬೈಕ್​​​ ನಡುವೆ ಡಿಕ್ಕಿ: ಸವಾರ ಸಾವು

author img

By

Published : Mar 5, 2020, 8:10 PM IST

Accident between KSRTC bus and bike
ಶಿವಕುಮಾರ್ (26) ಮೃತ ಯುವಕ

ರಾಜ್ಯ ಸಾರಿಗೆ ಬಸ್​ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ : ಕೆಎಸ್​ಆರ್​ಟಿಸಿ ಬಸ್​ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ದುಡ್ಡು ಕುರುಗೋಡು ಬಳಿ ನಡೆದಿದೆ. ಕಲ್ಲೂಡಿ ಗ್ರಾಮದ ಶಿವಕುಮಾರ್ (26) ಮೃತ ಯುವಕ ಎಂದು ತಿಳಿದು ಬಂದಿದೆ.

Accident between KSRTC bus and bike
ರಾಜ್ಯ ಸಾರಿಗೆ ಬಸ್​

ಹಿಂದೂಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಹಾಗೂ ಕಲ್ಲುಡಿಯಿಂದ ಹೋಗುತ್ತಿದ್ದ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Accident between KSRTC bus and bike
ಮೃತ ವ್ಯಕ್ತಿಯ ದ್ವಿಚಕ್ರ ವಾಹನ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.