ETV Bharat / state

ಯಾಕೋ ಹೀಗೆ ಅಂತಾ ಕೇಳಿದ್ರೇ.. ಗುಂಪುಗೂಡಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡೋದಾ..

author img

By

Published : Sep 20, 2020, 3:40 PM IST

ಹಲ್ಲೆಗೊಳಗಾದ ವ್ಯಕ್ತಿ ವೆಂಕಟೇಶ್​
ಹಲ್ಲೆಗೊಳಗಾದ ವ್ಯಕ್ತಿ ವೆಂಕಟೇಶ್​

ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿತ್ತು. ಹೀಗಾಗಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ನ್ಯಾಯ ತೀರ್ಮಾನಗಳು ನಡೆದಿತ್ತು.. ಆದರೂ ಹೀಗೆ..

ಚಿಕ್ಕಬಳ್ಳಾಪುರ : ಆಟವಾಡುತ್ತಿದ್ದ ಮಕ್ಕಳಿಗೆ ಕಿರುಕುಳ ಕೊಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದಕ್ಕೆ ಐವರ ತಂಡವೊಂಡು ಹಲ್ಲೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ನಂದನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೋಲಿ ಆಟವಾಡುತ್ತಿದ್ದ ಮಕ್ಕಳಿಗೆ ತೊಂದರೆ ಕೊಡುತ್ತಿದ್ದ ನಾಗೇಶ್​ ಎಂಬಾತನನ್ನು ವೆಂಕಟೇಶ್​ ಎಂಬುವರು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿತ್ತು. ಹೀಗಾಗಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ನ್ಯಾಯ ತೀರ್ಮಾನಗಳು ನಡೆದಿತ್ತು.

ಆದರೆ, ನಾಗೇಶ್ ತನ್ನ ಐವರು ಸ್ನೇಹಿತರೊಂದಿಗೆ ಸೇರಿ ಕುಡಿದ ಅಮಲಿನಲ್ಲಿ ರಾಡ್ ಹಾಗೂ ಮಚ್ಚಿನಿಂದ ವೆಂಕಟೇಶ್ ಮನೆಗೆ ನುಗ್ಗಿ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಸದ್ಯ ಅವರಿಂದ ತಪ್ಪಿಸಿಕೊಂಡು ಪರಾರಿಯಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸಂಬಂಧ ಕೇಂಚಾರ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.