ETV Bharat / state

ಆರೋಗ್ಯ ಸಚಿವರ ಸ್ವಗ್ರಾಮದಲ್ಲಿ ಅಬ್ಬರಿಸಿದ ಕಾಂಗ್ರೆಸ್ ನಾಯಕರು

author img

By

Published : Sep 30, 2021, 8:24 AM IST

Updated : Sep 30, 2021, 3:25 PM IST

chikkaballapur
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸ್ಪೀಕರ್​ ರಮೇಶ್ ಕುಮಾರ್

ಮಾಜಿ ಸ್ಪೀಕರ್​ ರಮೇಶ್ ಕುಮಾರ್, ಹೆಚ್.ಎನ್ ಶಿವಶಂಕರರೆಡ್ಡಿ, ವಿ ಮುನಿಯಪ್ಪ, ಎಸ್.ಎನ್.ಸುಬ್ಬಾರೆಡ್ಡಿ, ಕೃಷ್ಣಬೈರೇಗೌಡ ಸೇರಿದಂತೆ ಪ್ರಮುಖ ಕಾಂಗ್ರೆಸ್​ ನಾಯಕರು ಚಿಕ್ಕಬಳ್ಳಾಪುರದಲ್ಲಿ ನಡೆದ ಬೀದಿಬದಿ ವ್ಯಾಪಾರಿಗಳಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಚಿಕ್ಕಬಳ್ಳಾಪುರ: ಜಿ.ಹೆಚ್ ಪೌಂಡೇಶನ್​​​​​ನಿಂದ ವಿನಯ್ ಶಾಮ್ ಆಯೋಜಿಸಿದ್ದ ಬೀದಿಬದಿ ವ್ಯಾಪಾರಿಗಳಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ರಮೇಶ್ ಕುಮಾರ್, ಹೆಚ್.ಎನ್ ಶಿವಶಂಕರರೆಡ್ಡಿ, ವಿ ಮುನಿಯಪ್ಪ, ಎಸ್.ಎನ್.ಸುಬ್ಬಾರೆಡ್ಡಿ, ಕೃಷ್ಣಬೈರೇಗೌಡ ಭಾಗವಹಿಸಿದ್ರು.

ಈ ವೇಳೆ ಮಾತನಾಡಿದ ರಮೇಶ್ ಕುಮಾರ್, ಪರೋಕ್ಷವಾಗಿ ಸಚಿವ ಸುಧಾಕರ್ ವಿರುದ್ಧ ಅವರ ಸ್ವಗ್ರಾಮ ಪರೇಸಂದ್ರದಲ್ಲಿ ವಾಕ್ಸಮರ ನಡೆಸಿದ್ರು. ಕಾಂಗ್ರೆಸ್ ಪಕ್ಷ ಈ ಕ್ಷೇತ್ರದಲ್ಲಿ ಇನ್ನೂ ಜೀವಂತವಾಗಿದೆ. ಸ್ವಾತಂತ್ರ್ಯ ಬಂದ ಮೇಲೆ ಬಿಜೆಪಿ ಹುಟ್ಟಿಕೊಂಡಿದ್ದು, ಅದಕ್ಕೂ ಮುಂಚೆ ಕಾಂಗ್ರೆಸ್​ ಪಕ್ಷ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿತ್ತು. ಬಿಜೆಪಿಯವರು ದುರಹಂಕಾರದಿಂದ ಮೆರೆದರೆ ಜನ ಚುನಾವಣೆಯಲ್ಲಿ ಬುದ್ದಿ ಕಲಿಸುತ್ತಾರೆ. ಜನತಾ ನ್ಯಾಯಾಲಯದಲ್ಲಿ ತೀರ್ಪು ಸಿಗುತ್ತದೆ ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸ್ಪೀಕರ್​ ರಮೇಶ್ ಕುಮಾರ್

ಇನ್ನು ಸಚಿವ ಸುಧಾಕರ್ ಬಗ್ಗೆ ಮಾತನಾಡಿದ ರಮೇಶ್ ಕುಮಾರ್, ಮರ್ಯಾದೆ ಇಲ್ಲದವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್​ ಕೊಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಕೃಷ್ಣಬೈರೇಗೌಡ, ಎತ್ತಿನಹೊಳೆ ಪ್ರಾಜೆಕ್ಟ್ ಬಗ್ಗೆ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರು ಇದುವರೆಗೂ ಒಂದು ಮಾತಾಡಿಲ್ಲ, ಕೇವಲ ಮಂತ್ರಿ ಆಗಬೇಕು, ದುಡ್ಡು ಮಾಡಿಕೊಳ್ಳುವುದರಲ್ಲಿಯೇ ಸಚಿವರು ಬ್ಯುಸಿಯಾಗಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಜನ ಏನು ಅನ್ಯಾಯ ಮಾಡಿದ್ದಾರೆ. ಈ ದೇಶ ಉದ್ಧಾರ ಆಗಬೇಕಾದರೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು ಎಂದರು.

Last Updated :Sep 30, 2021, 3:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.