ಚಿಕ್ಕಬಳ್ಳಾಪುರ: ಜನಸಾಮಾನ್ಯರ ಕೆಲಸ ಮಾಡಿಕೊಡಲು ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ರೆ ಲೋಕಾಯುಕ್ತಕ್ಕೆ ದೂರು ಕೊಡಿ ಎಂದು ಲೋಕಾಯುಕ್ತ ಅಧೀಕ್ಷಕ ಮೋಹನ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯ ಗುಡಿಬಂಡೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತ ಅಧೀಕ್ಷಕರು ಸಾರ್ವಜನಿಕರಿಂದ ದೂರು ಹಾಗೂ ಕುಂದು ಕೊರತೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿಕೊಡಲು ಅಧಿಕಾರಿಗಳ ವಿಳಂಬ, ಸಾರ್ವಜನಿಕ ಸ್ಥಳಗಳ ಒತ್ತುವರಿ, ಕೆರೆ ಒತ್ತುವರಿ, ಕಂದಾಯ ಇಲಾಖೆಯಲ್ಲಿ ಜಮೀನಿಗೆ ಸಂಬಂಧಪಟ್ಟ ದಾಖಲೆಗಳನ್ನು ಮಾಡಿಕೊಡಲು ನಿಧಾನಗತಿ, ಭ್ರಷ್ಟಾಚಾರ ಹೀಗೆ ಹಲವು ವಿಚಾರಗಳಿಗೆ ಸಂಬಂಧಪಟ್ಟ ದೂರು ದಾಖಲಿಸಿದರು.
ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಸೇರಿದಂತೆ ಬಹುತೇಕ ಕಂದಾಯ ಇಲಾಖೆ ಅಧಿಕಾರಿಗಳು ಭೂ ಅಭಿವೃದ್ಧಿಗಾರರ (ಲ್ಯಾಂಡ್ ಡೆವಲಪರ್ಸ್) ಕೆಲಸಗಳನ್ನು ಮಾತ್ರ ತುರ್ತಾಗಿ ಮಾಡಿಕೊಟ್ಟು, ರೈತರು ಮತ್ತು ಜನಸಾಮಾನ್ಯರ ಕೆಲಸಗಳ ಬಗ್ಗೆ ನಿರ್ಲಕ್ಷ್ಯವಹಿಸುತ್ತಿರುವುದು ಕಂಡು ಬಂದಿದೆ. ಇದು ಹೀಗೆ ಮುಂದುವರೆದರೆ ಲೋಕಾಯುಕ್ತಕ್ಕೆ ದೂರು ಕೊಡಿ ಎಂದು ತಿಳಿಸಿದ್ರು.