ETV Bharat / state

ವೀರ ಸಾವರ್ಕರ್ ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಸುಧಾಕರ್

author img

By

Published : Dec 19, 2022, 3:58 PM IST

ಆರೋಗ್ಯ ಸಚಿವ ಡಾ ಕೆ ಸುಧಾಕರ್
ಆರೋಗ್ಯ ಸಚಿವ ಡಾ ಕೆ ಸುಧಾಕರ್

ವೀರ ಸಾವರ್ಕರ್ ಒಬ್ಬ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ. ತಮ್ಮ ಯೌವ್ವನವನ್ನೇ ಸ್ವಾತಂತ್ರ್ಯ ಹೋರಾಟಕ್ಕೆ ಮುಡಿಪಾಗಿಟ್ಟವರು. ವೀರ ಸಾವರ್ಕರ್ ಫೋಟೋಗೆ ಕಾಂಗ್ರೆಸ್ ಆಕ್ಷೇಪ ಸರಿ ಅಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಮಾತನಾಡಿದರು

ಚಿಕ್ಕಬಳ್ಳಾಪುರ: ವೀರ ಸಾವರ್ಕರ್ ಫೋಟೋ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸುವರ್ಣಸೌಧದಲ್ಲಿ ವೀರ ಸಾವರ್ಕರ್ ಫೋಟೋಗೆ ಕಾಂಗ್ರೆಸ್ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಕಿಡಿಕಾರಿದ್ದಾರೆ.

ವೀರ ಸಾವರ್ಕರ್ ಒಬ್ಬ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು. ತಮ್ಮ ಯೌವ್ವನವನ್ನೇ ಸ್ವಾತಂತ್ರ್ಯ ಹೋರಾಟಕ್ಕೆ ಮುಡಿಪಾಗಿಟ್ಟವರು. ವೀರ ಸಾವರ್ಕರ್ ಫೋಟೋಗೆ ಕಾಂಗ್ರೆಸ್ ಆಕ್ಷೇಪ ಸರಿ ಅಲ್ಲ. ಎಲ್ಲವನ್ನೂ ರಾಜಕಾರಣದ ಉದ್ದೇಶದಿಂದ ನೋಡೋದು ಕಾಂಗ್ರೆಸ್​ಗೆ ಹವ್ಯಾಸ. ಸದನದಲ್ಲಿ‌ ಜನಪರ ವಿಷಯಗಳನ್ನು ಚರ್ಚೆ ಮಾಡಲು ಕಾಂಗ್ರೆಸ್ ಪಕ್ಷದವರ ಬಳಿ ವಿಷಯಗಳಿಲ್ಲ. ರಚನಾತ್ಮಕ ಸಲಹೆಗಳನ್ನು ಕೊಡೋದು‌ ಬಿಟ್ಟು ಪ್ರತಿಭಟನೆ ಮಾಡೋದು ಸರಿ ಅಲ್ಲ. ಇದು ರಾಜ್ಯದ ಜನರಿಗೆ ಮಾಡ್ತಿರೋ ಅವಮಾನ, ಅಪಮಾನವಾಗಿದೆ ಎಂದು ಉತ್ತರಿಸಿದರು.

ಫೋಟೋ ಇಡೋವಾಗ ಚರ್ಚೆ ಮಾಡಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ಸರ್ಕಾರ ಇದ್ದಾಗ ಅವರು ವಿಪಕ್ಷಗಳ ಜೊತೆ ಚರ್ಚೆ ಮಾಡಿ ಇಟ್ಟಿದ್ರಾ? ಇದು ಡಬಲ್ ಸ್ಯಾಂಡರ್ಡ್ ನಿಲುವು. ಇದನ್ನು ಜನ ನೋಡ್ತಾರೆ. ಯಾವಾಗಲೂ ದಸರಾ ಮಾಡೋಕೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಸುಧಾಕರ್ ಇದೇ ವೇಳೆ ತಿರುಗೇಟು ನೀಡಿದ್ದಾರೆ.

ಓದಿ: ಗಾಂಧೀಜಿ ಸಾವಿನಲ್ಲಿ ಸಾವರ್ಕರ್ ಕೈವಾಡವಿದೆ, ಸದನದಲ್ಲಿ ಅವರ ಫೋಟೋ ಅಗತ್ಯವಿಲ್ಲ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.