ನಂದಿಬೆಟ್ಟದಲ್ಲಿ ಗಿಡ ನೆಡುವ ಅಭಿಯಾನಕ್ಕೆ ಸದ್ಗುರು ಜಗ್ಗಿ ವಾಸುದೇವ್ ಚಾಲನೆ

author img

By

Published : Sep 18, 2021, 3:51 PM IST

Jaggi Vasudev participated in plant the tree program

ನಂದಿ ಬೆಟ್ಟದ ಸುತ್ತಮುತ್ತಲಿನ ಪ್ರದೇಶವನ್ನು ಮತ್ತೆ ಹಸಿರಾಗಿಸಲು ಯುವಜನತೆ ಹೆಚ್ಚಿನ ಒಲವು ತೋರಬೇಕಾಗಿದೆ. ಹಸಿರು ಕ್ರಾಂತಿ ಹೆಚ್ಚಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಇಂದು 300ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದಾರೆ ಎಂದು ಅಧಿಕಾರಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಇಶಾ ಫೌಂಡೇಷನ್ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು..

ಚಿಕ್ಕಬಳ್ಳಾಪುರ : ನಮ್ಮ ನಂದಿ ಹಸಿರು ಬೆಂಗಳೂರು ಗಿಡ ನೆಡುವ ಅಭಿಯಾನಕ್ಕೆ‌ ಇಶಾ ಫೌಂಡೇಷನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಚಾಲನೆ ನೀಡಿದರು.

ನಂದಿಬೆಟ್ಟದಲ್ಲಿ ಗಿಡ ನೆಡುವ ಅಭಿಯಾನಕ್ಕೆ ಸದ್ಗುರು ಜಗ್ಗಿ ವಾಸುದೇವ್ ಚಾಲನೆ

ಇಶಾ ಫೌಂಡೇಷನ್​​​ಗೆ ಜಿಲ್ಲಾಡಳಿತ ಸಾಥ್ : ನಂದಿಗಿರಿಧಾಮ ಪಂಚಗಿರಿಗಳ ಸಾಲಿನಲ್ಲಿ ಹಸಿರೀಕರಣ ಮಾಡಲು ಮುಂದಾಗಿರುವ ಇಶಾ ಫೌಂಡೇಷನ್ ಅನುಯಾಯಿಗಳಿಗೆ ಜಿಲ್ಲಾಡಳಿತ ಸಾಥ್ ನೀಡಿದ್ದು, ಸ್ವತಃ ಜಿಲ್ಲಾಧಿಕಾರಿ ಲತಾ ಆರ್, ಎಸ್ಪಿ ಜಿ ಕೆ ಮಿಥುನ್‌ಕುಮಾರ್, ಉಪ ಅರಣ್ಯಸಂರಕ್ಷಣಾಧಿಕಾರಿ ಅರಸಲನ್ ಸೇರಿ ಸ್ಥಳೀಯ ಅರಣ್ಯಾಧಿಕಾರಿಗಳು, ಸಿಬ್ಬಂದಿ, ಹಸಿರೀಕರಣಕ್ಕೆ ಸಾಥ್ ನೀಡಿದ್ರು.

ಯುವಜನತೆ ಬೆಂಬಲ ಅಗತ್ಯ : ಗಿಡಗಳನ್ನು ನೆಡುವ ಕಾರ್ಯಕ್ರಮಗಳಲ್ಲಿ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪರಿಸರ ಸಂರಕ್ಷಣೆ ಎನ್ನುವುದು ತಾನಾಗಿಯೇ ಮಾಡಬೇಕು. ಹಲವೆಡೆ ಮರಗಳನ್ನು ಕಡಿದು ಹಾಕಲಾಗಿದೆ. ಪರಿಸರ ಸಂಪತ್ತನ್ನು ಉಳಿಸುವ ಕೆಲಸ ಆಗಬೇಕು. ಇದಕ್ಕೆ ಜನತೆಯ ಬೆಂಬಲ ಬೇಕಾಗಿದ್ದು, ಇದರಿಂದ ಪರಿಸರ ಕಾಪಾಡಲು ಸಹಕಾರಿಯಾಗಲಿದೆ ಎಂದು ಸದ್ಗುರು ಹೇಳಿದರು.

ನಂದಿ ಬೆಟ್ಟದ ಸುತ್ತಮುತ್ತಲಿನ ಪ್ರದೇಶವನ್ನು ಮತ್ತೆ ಹಸಿರಾಗಿಸಲು ಯುವಜನತೆ ಹೆಚ್ಚಿನ ಒಲವು ತೋರಬೇಕಾಗಿದೆ. ಹಸಿರು ಕ್ರಾಂತಿ ಹೆಚ್ಚಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಇಂದು 300ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದಾರೆ ಎಂದು ಅಧಿಕಾರಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಇಶಾ ಫೌಂಡೇಷನ್ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು.

ಇದನ್ನೂ ಓದಿ: ಹಣ-ಆಸ್ತಿ ಎಲ್ಲವೂ ಇತ್ತು.. ಮಾನಸಿಕ ನೆಮ್ಮದಿ ಮರೆಯಾಗಿತ್ತು: ಮಕ್ಕಳ ದಾಂಪತ್ಯದ ಬಿರುಕಿಗೆ ಇಡೀ ಕುಟುಂಬ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.