ETV Bharat / state

ಚಿಕ್ಕಬಳ್ಳಾಪುರದಲ್ಲಿ ಭೂಮಿ ಕಂಪಿಸಿದ ಅನುಭವ: ಮನೆ ಬಿಟ್ಟು ಹೊರ ಬಂದ ಗ್ರಾಮಸ್ಥರು

author img

By

Published : Nov 10, 2021, 9:54 AM IST

chikkaballapura
ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ

ಚಿಕ್ಕಬಳ್ಳಾಫುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ಮುಂಜಾನೆ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಚಿಕ್ಕಬಳ್ಳಾಫುರ: ಇಂದು ಮುಂಜಾನೆ ಭೂಮಿ ಕಂಪಿಸಿದ ಅನುಭವವಾದ ಹಿನ್ನೆಲೆ ಗ್ರಾಮಸ್ಥರೆಲ್ಲಾ ಮನೆಯಿಂದ ಹೊರ ಬಂದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ನಸುಕಿನ ಜಾವ ಭೂಮಿಯಲ್ಲಿ ದೊಡ್ಡ ಶಬ್ದವೊಂದು ಕೇಳಿಸಿದ್ದು, ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬೀಳಲಾರಂಭಿಸಿದವು. ಇದರಿಂದ ಆತಂಕಗೊಂಡ ಮಿಟ್ಟಹಳ್ಳಿ, ನಂದನವನ, ಅಪ್ಸನಹಳ್ಳಿ,ಗೋನೇನಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ

ಕಳೆದ ದಿನ ರಾತ್ರಿ 10 ಗಂಟೆ ಸುಮಾರಿಗೆ ಒಂದು ಬಾರಿ ಭೂಮಿ ಕಂಪಿಸಿದ್ದು, ಭಯದಲ್ಲೇ ಗ್ರಾಮಸ್ಥರು ಮನೆ ಸೇರಿಕೊಂಡಿದ್ದರು. ತದ ನಂತರ ಇಂದು ಮುಂಜಾನೆ 5 ಗಂಟೆಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.