ಅಪಘಾತದಲ್ಲಿ 7 ಸಾವು: ಸ್ಥಳಕ್ಕೆ ಧಾವಿಸಿ ಮಾನವೀಯತೆ ಮೆರೆದ ಶಾಸಕ ನಂಜೇಗೌಡ

author img

By

Published : Sep 12, 2021, 6:41 PM IST

mla nanjegowda helps to move accident victims to hospital

ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳದಲ್ಲೇ ಇದ್ದು, ಆ್ಯಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ಕಳುಹಿಸಲು ಶಾಸಕ ನಂಜೇಗೌಡ ನೆರವಾದರು.

ಚಿಕ್ಕಬಳ್ಳಾಪುರ: ಚಿಂತಾಮಣಿ-ಮದನಪಲ್ಲಿ ಮಾರ್ಗದ ಮಾಡಿಕೆರೆ ಕ್ರಾಸ್ ಬಳಿ ಲಾರಿ ಮತ್ತು ಜೀಪ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಏಳು ಜನ ಮೃತಪಟ್ಟಿದ್ದಾರೆ. ಇನ್ನೂ ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಮಾನವೀಯತೆ ಮೆರೆದ ಶಾಸಕ ನಂಜೇಗೌಡ

ಈ ವೇಳೆ ಇದೇ ರಸ್ತೆಯಲ್ಲಿ ಪ್ರಯಾಣ ಮಾಡುತ್ತಿದ್ದ ಮಾಲೂರು ಶಾಸಕರಾದ ಕೆ.ವೈ.ನಂಜೇಗೌಡ,​​ ಅಪಘಾತ ಕಂಡು ಸ್ಥಳದಲ್ಲೇ ಇದ್ದು ಆ್ಯಂಬುಲೆನ್ಸ್ ಹಾಗೂ ಪೊಲೀಸರನ್ನು ಸ್ಥಳಕ್ಕೆ ಕರೆಸಿದರು. ನಂತರ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಲಾರಿ- ಜೀಪ್ ನಡುವೆ ಭೀಕರ ಅಪಘಾತ, 7 ಸಾವು, ಐವರು ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.