ETV Bharat / state

ಟ್ರ್ಯಾಕ್ಟರ್ ಚಾಲಕನ ಅಜಾಗರೂಕ ಚಾಲನೆ ಆರೋಪ, ಬೈಕ್​ ಸವಾರ ಬಲಿ

author img

By

Published : Jan 16, 2020, 5:57 PM IST

Chikkaballapur road accident
ಚಿಕ್ಕಬಳ್ಳಾಪುರ ರಸ್ತೆ ಅಪಘಾತ ನ್ಯೂಸ್

ಟ್ರ್ಯಾಕ್ಟರ್ ಚಾಲಕ ಅತಿವೇಗದಿಂದ ವಾಹನ ಚಲಾಯಿಸಿದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಶಂಬೂಕನಗರ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಚಾಲಕನ ಅತಿವೇಗದಿಂದ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಶಂಬೂಕನಗರ ಬಳಿ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್​ ನಡುವೆ ಡಿಕ್ಕಿ

ಕಲಿದೇವನಪುರ ಗ್ರಾಮದ ಮೋಹನ್ (25) ಅಪಘಾತದಲ್ಲಿ ಮೃತಪಟ್ಟ ಯುವಕ.

ಮತ್ತೋರ್ವ ಹಿಂಬದಿ ಸವಾರ ಸುಭ್ರಮಣಿಗೆ ಗಾಯಗಳಾಗಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಂತರ ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿತ್ತು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೇ ಮೋಹನ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

Intro:ಟ್ರಾಕ್ಟರ್ ಚಾಲಕನ ಅತಿವೇಗದಿಂದ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಶಂಬೂಕನಗರ ಬಳಿ ನಡೆದಿದೆ.
Body:ಮೃತ ಯುವಕನನ್ನು ಕಲಿದೇವನಪುರ ಗ್ರಾಮದ ಮೋಹನ್ (25) ರಂದು ಗುರುತ್ತಿಸಲಾಗಿದೆ.ಮತ್ತೋರ್ವ ಹಿಂಬಧಿ ಸವಾರ ಸುಭ್ರಮಣಿ ತೀರ್ವ ಗಾಯಗಳಾಗಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೋಹನ್ ಹಾಗೂ ಸುಭ್ರಮಣಿ ದೊಡ್ಡಬಳ್ಳಾಪುರ ಮಾರ್ಗದಿಂದ ಗೌರಿಬಿದನೂರಿಗೆ ಕೆಲಸದ ನಿಮಿತ್ತಾ ಬರುವ ವೇಳೆ ಗೌರಿಬಿದನೂರು ಮಾರ್ಗದಿಂದ ಅಜಾಗರುಕತೆಯಿಂದ ಟ್ರಾಕ್ಟರ್ ಚಾಲನೆ ಮಾಡಿಕೊಂಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.ಇನ್ನೂ ಅಪಘಾತದ ನಂತರ ಸ್ಥಳೀಯರ ಸಹಾಕಾರದಿಂದ ಅಂಬೂಲೆನ್ಸ್‌ಗೆ ಕರೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಿಸಿದ್ದಾರೆ.ಇನ್ನೂ ಚಿಕಿತ್ಸೆ ಫಲಕಾರಿಯಾಗದೇ ಮೋಹನ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇನ್ನೂ ಈ ಪ್ರಕರಣ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.