ETV Bharat / state

ಮಾಧ್ಯಮ ಪ್ರತಿನಿಧಿಗಳಿಗೆ ರಕ್ಷಣೆ ನೀಡುವಂತೆ ರೈತಸಂಘ ಒತ್ತಾಯ

author img

By

Published : Aug 14, 2020, 6:31 PM IST

Protection for media representatives
ಮಾಧ್ಯಮ ಪತ್ರಿನಿಧಿಗಳಿಗೆ ರಕ್ಷಣೆ ನೀಡುವಂತೆ ರೈತರ ಒತ್ತಾಯ

ಈಚೆಗೆ ನಡೆದ ಬೆಂಗಳೂರು ಗಲಭೆ ಪ್ರಕರಣವನ್ನು ಖಂಡಿಸಿ, ಮಾಧ್ಯಮದವರ ಮೇಲೆ ನಡೆವ ಹಲ್ಲೆಗಳಿಗೆ ಸರ್ಕಾರ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಚಿಕ್ಕಬಳ್ಳಾಪುರ (ಚಿಂತಾಮಣಿ): ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ದೃಶ್ಯ ಮಾಧ್ಯಮದ ವರದಿಗಾರರು ಮತ್ತು ಕ್ಯಾಮರಾಮೆನ್‍ಗಳ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪುಟ್ಟಣ್ಣಯ್ಯ ಬಣ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಾಧ್ಯಮ ಪ್ರತಿನಿಧಿಗಳಿಗೆ ರಕ್ಷಣೆ ನೀಡುವಂತೆ ರೈತರ ಒತ್ತಾಯ

ಗಲಭೆ, ಗಲಾಟೆಗಳ ಸಂದರ್ಭದಲ್ಲಿ ಮಾಧ್ಯಮದವರಿಗೆ ರಕ್ಷಣೆ ಇಲ್ಲವಾಗಿದೆ. ಪತ್ರಕರ್ತರನ್ನು ಗುರಿಯಾಗಿಸಿಕೊಂಡು ವಿನಾಕಾರಣ ಹಲ್ಲೆ ನಡೆಸುವವರನ್ನು ಕೂಡಲೇ ಬಂಧಿಸಿ, ಕಾನೂನು ರೀತಿಯಲ್ಲಿ ಶಿಕ್ಷಿಸುವಂತೆ ರಾಜ್ಯದ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಹಲ್ಲೆಗೊಳಗಾದ ಮಾಧ್ಯಮದವರಿಗೆ ಪರಿಹಾರ ನೀಡಿ, ರಕ್ಷಣೆಗೆ ಮುಂದಾಗುವಂತೆ ಮನವಿ ಮಾಡಿದರು.

ತಾಲೂಕು ಅಧ್ಯಕ್ಷ ಆರ್.ವಿ. ರಮೇಶ್ ಬಾಬು, ಗೌರವ ಅಧ್ಯಕ್ಷ ವಿ. ಚಲಪತಿ, ತಾಲೂಕು ಕಾರ್ಯದರ್ಶಿ ಹೆಚ್.ಎನ್. ಕದಿರೇಗೌಡ, ಜಿಲ್ಲಾ ಪ್ರಧಾನ ಸಂಚಾಲಕ ಆರ್. ಹುಸೇನ್ ಸಾಬಿ, ಖಜಾಂಚಿ ರಮೇಶ್ ರೆಡ್ಡಿ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.