ETV Bharat / state

ಜಿಂಕೆ ಮಾಂಸ ಕತ್ತರಿಸುತ್ತಿದ್ದ ಮೂವರು ಖದೀಮರು ಅರೆಸ್ಟ್

author img

By

Published : Nov 12, 2021, 1:01 PM IST

arrest
ಮೂವರ ಬಂಧನ

ಚಿಕ್ಕಬಳ್ಳಾಪುರದ ಆರೂರು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆ ಮಾಂಸ (Venison) ಕತ್ತರಿಸುತ್ತಿದ್ದ ಮೂವರು ಖದೀಮರನ್ನು ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಜಿಂಕೆ ಮಾಂಸ (Venison) ಕತ್ತರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರದ ಆರೂರು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ವೆಂಕಟೇಶಪ್ಪ (65), ರಾಜಣ್ಣ (55), ವೆಂಕಟೇಶ್ (35) ಬಂಧಿತರು. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ 10 ಕೆ.ಜಿ. ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂಧಿಸಿದೆ. ಈ ವೇಳೆ, ಇನ್ನಿಬ್ಬರು ಆರೋಪಿಗಳಾದ ಸುಶೀಲಮ್ಮ ಮತ್ತು ವೆಂಕಟಲಕ್ಷ್ಮಮ್ಮ ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Watch.. ಭೀಕರ ರಸ್ತೆ ಅಪಘಾತ: ಧಗಧಗನೆ ಹೊತ್ತಿ ಉರಿದ ಟಿಪ್ಪರ್, ದ್ವಿಚಕ್ರ ವಾಹನ ಸವಾರ ಸಾವು

ಈ ಕುರಿತು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕತ್ತೆ ಸಾವು: ಸಾಂಪ್ರದಾಯಿಕವಾಗಿ ಮಣ್ಣು ಮಾಡಿ, ತಿಥಿ ಕಾರ್ಯ ನೆರವೇರಿಸಿದ ಗ್ರಾಮಸ್ಥರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.