ETV Bharat / state

ಲಾಕ್​​ಡೌನ್ ತಂದಿಟ್ಟ ಸಂಕಷ್ಟ: ಮಹಿಳೆ ಆತ್ಮಹತ್ಯೆ

author img

By

Published : Jul 6, 2020, 6:00 PM IST

Women committed suicide at Chikkaballapur
ನೇಕಾರ ಮಹಿಳೆ ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದಲ್ಲಿ ನೇಕಾರಿಯನ್ನೇ ವೃತ್ತಿಯಾಗಿಸಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಇದರಿಂದ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಲಾಕ್​​ಡೌನ್​ ಸಂಕಷ್ಟದಿಂದ ನೊಂದ ನೇಕಾರ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನೇಕಾರ ಮಹಿಳೆ ಆತ್ಮಹತ್ಯೆಗೆ ಶರಣು

ಗ್ರಾಮದ ವೆಂಕಟಲಕ್ಷ್ಮಮ್ಮ(55) ನೇಣಿಗೆ ಶರಣಾದ ಮಹಿಳೆ. ಈ ಕುಟುಂಬ ನೇಕಾರಿಕೆಯನ್ನೇ ವೃತ್ತಿಯಾಗಿಸಿಕೊಂಡು ಜೀವನ ನಿರ್ವಹಣೆ ಮಾಡುತ್ತಿತ್ತು. ಲಾಕ್​ಡೌನ್​ದಿಂದಾಗಿ ವ್ಯಾಪಾರ-ವಾಹಿವಾಟಿಲ್ಲದೆ ಜೀನವ ನಡೆಸಲು ಬ್ಯಾಂಕ್​ ಸೇರಿದಂತೆ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ.

ಈ ನಡುವೆ ಮೃತ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಔಷಧಿಗೂ ಹಣವಿಲ್ಲದೆ ನೊಂದಿದ್ದರು. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.