ETV Bharat / state

ಯುವಕನ ಕೊಲೆ ಕೇಸ್​: ಪ್ರಕರಣ ಭೇದಿಸಿದ ಚಿಕ್ಕಬಳ್ಳಾಪುರ ಪೊಲೀಸರು

author img

By

Published : Oct 5, 2020, 5:39 PM IST

Updated : Oct 5, 2020, 5:50 PM IST

ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು

ಮಾರ್ಚ್​ 3ರಂದು ಚಿತ್ರಾವತಿ ಡ್ಯಾಂ ಬಳಿ ಯುವಕನ ಶವವೊಂದು ಪತ್ತೆಯಾಗಿದ್ದು, ಈ ಕೇಸ್​ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸರು ಪ್ರಕರಣ ಭೇದಿಸಿ ನಾಲ್ವರನ್ನು ಬಂಧಿಸಿದ್ದಾರೆ.

ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪರಗೋಡು ಗ್ರಾಮದ ಬಳಿಯ ಚಿತ್ರಾವತಿ ಡ್ಯಾಂ ಬಳಿ ಯುವಕನ ಶವ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್​ 3ರಂದು ಚಿತ್ರಾವತಿ ಡ್ಯಾಂ ಬಳಿ ರಾಜ್​ ಎಂಬ ಯುವಕನ ಶವ ಪತ್ತೆಯಾಗಿತ್ತು. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ 66/2020 ಕಲಂ, ಐಪಿಸಿ ಸೆಕ್ಷನ್​ 302 ಮತ್ತು 201ರ ಅಡಿ ಕೇಸು ದಾಖಲಿಸಲಾಗಿತ್ತು. ಬಳಿಕ ಚಿಕ್ಕಬಳ್ಳಾಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ. ರವಿಶಂಕರ್, ಸಿಪಿಐ ನಯಾಜ್ ಬೇಗ್ ಮತ್ತು ಸುನೀಲ್ ಕುಮಾರ್​ ಅವರ ನೇತೃತ್ವದಲ್ಲಿ ಯುವಕನ ಕೊಲೆ ಪ್ರಕರಣದ ತನಿಖೆ ತೀವ್ರಗೊಳಿಸಿದರು. ಬಳಿಕ ವೈಜ್ಞಾನಿಕ ಸಾಕ್ಷಾಧಾರಗಳು ಮತ್ತು ಸುಳಿವಿನ ಮೇರೆಗೆ ಪ್ರಕರಣ ಭೇದಿಸಿ 4 ಜನ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಈ ಕೃತ್ಯಕ್ಕೆ ಉಪಯೋಗಿಸಿದ ಕಾರು ಮತ್ತು ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಮುಖ ಆರೋಪಿ ಬಾಂಬೆ ಸಲೀಂ, ಬಾಗೇಪಲ್ಲಿ ನಿವಾಸಿಗಳಾದ ನಾರಾಯಣ ಸ್ವಾಮಿ, ಚೇತನ್ ಕುಮಾರ್, ಬಾಲಚಂದ್ರ, ವಿನೋದ್ ಕುಮಾರ್​ ಜೊತೆ ಸೇರಿಕೊಂಡು ರಾಜ್ ಎಂಬಾತನನ್ನು ಡ್ರ್ಯಾಗರ್ ಮತ್ತು ಇತರ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇನ್ನು ಈ ಪ್ರಕರಣವನ್ನು ಬೆಳಕಿಗೆ ತಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪೊಲೀಸ್​​ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

Last Updated :Oct 5, 2020, 5:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.