ETV Bharat / state

ಚಿಕ್ಕಮಗಳೂರಿನಲ್ಲಿ ದತ್ತಮಾಲಾ ಅಭಿಯಾನ: ಮಾಲಾಧಾರಿಗಳಿಂದ ಪಡಿ ಸಂಗ್ರಹ

author img

By

Published : Nov 14, 2021, 7:42 AM IST

ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ಶ್ರೀರಾಮ ಸೇನೆ (Sri Ram Sena) ವತಿಯಿಂದ ನಡೆಯುತ್ತಿರುವ 17ನೇ ವರ್ಷದ ದತ್ತಮಾಲಾ ಅಭಿಯಾನದ (Dattamaala campaign in Chikkamagaluru) ಅಂಗವಾಗಿ ನಿನ್ನೆ ಮಾಲಾಧಾರಿಗಳು ಪಡಿ ಸಂಗ್ರಹ ಮಾಡಿದರು.

17th Year Dattamaala campaign
ದತ್ತಮಾಲಾ ಮಾಲಾಧಾರಿಗಳಿಂದ ಪಡಿ ಸಂಗ್ರಹ

ಚಿಕ್ಕಮಗಳೂರು: 17ನೇ ವರ್ಷದ ದತ್ತಮಾಲಾ ಅಭಿಯಾನದ (Dattamaala campaign in Chikkamagaluru) ಅಂಗವಾಗಿ ಶ್ರೀರಾಮ ಸೇನೆಯ ಮಾಲಾಧಾರಿಗಳು ನಗರದಲ್ಲಿ ಮನೆ ಮನೆಗೆ ತೆರಳಿ ಪಡಿ ಸಂಗ್ರಹ ಮಾಡಿದರು.

ನಗರದ ವಿಜಯಪುರ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ಮನೆ ಮನೆಗೆ ತೆರಳಿ ದತ್ತಾತ್ರೇಯ ಸ್ವಾಮಿಗೆ ಪ್ರಿಯವಾದ ಅಕ್ಕಿ, ಬೆಲ್ಲ, ತೆಂಗಿನಕಾಯಿ, ಕಾಳುಗಳನ್ನು ಪಡಿಯ ರೂಪದಲ್ಲಿ ಸಂಗ್ರಹಿಸಿದರು. ಈ ವೇಳೆ ಶ್ರೀ ರಾಮಸೇನೆ (Sri Ram Sena) ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿದಂತೆ ಹಲವರು ಭಾಗಿಯಾಗಿದ್ದರು.


ಇಂದು ಇನಾಂ ದತ್ತಾತ್ರೇಯ ಪೀಠದಲ್ಲಿ (Inam Dattatreya Peetha) ಧಾರ್ಮಿಕ ಸಮಾರೋಪ ಸಮಾರಂಭ ನಡೆಯಲಿದ್ದು, ಸಾವಿರಾರು ಮಾಲಾಧಾರಿಗಳು ಭಾಗವಹಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.