ETV Bharat / state

ಆನೆ ದಂತದಲ್ಲಿ ಚೆಸ್‌ ಪಾನ್ ತಯಾರಿಸಿ ಮಾರಾಟ ಯತ್ನ, ಆರೋಪಿ ಬಂಧನ

author img

By

Published : Apr 26, 2022, 3:52 PM IST

ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿಸಿ ಮಾರಾಟಕ್ಕೆ ಯತ್ನಿಸಿದ ಆರೋಪಿ ಬಂಧನ
ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿಸಿ ಮಾರಾಟಕ್ಕೆ ಯತ್ನಿಸಿದ ಆರೋಪಿ ಬಂಧನ

ಚಿಕ್ಕಮಗಳೂರು ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಚಿಕ್ಕಮಗಳೂರು: ಆನೆ ದಂತದಲ್ಲಿ ಚದುರಂಗದ ಪಾನ್‌ಗಳನ್ನು ತಯಾರಿ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಕಪ್ಪು ಹಾಗೂ ಬಿಳಿ ಬಣ್ಣದ 32 ಪಾನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

Accused arrested for trying sell the ivory in chikkamagaluru
ಜಿಂಕೆ ಕೊಂಬು ವಶ

ಚಿಕ್ಕಮಗಳೂರು ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸಕಲೇಶಪುರ ಮೂಲದ ಮೆಲ್ವಿನ್ ಬಂಧಿತ ಆರೋಪಿ. ಪಾನ್ ಜೊತೆ ಟ್ರೋಫಿಗೆ ಹಾಕಿರುವ ಜಿಂಕೆ ಕೊಂಬು ಪತ್ತೆಯಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Accused arrested for trying sell the ivory in chikkamagaluru
ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿ

ಇದನ್ನೂ ಓದಿ: ಕೊರೊನಾ ನಾಲ್ಕನೇ ಅಲೆಗೆ ಹೆದರಬೇಡಿ, ಜಾಗ್ರತೆ ವಹಿಸಿ: ಸಿಎಂ ಬೊಮ್ಮಾಯಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.