ETV Bharat / state

ಚಿಕ್ಕಮಗಳೂರು: ಬಜರಂಗದಳ ಕಾರ್ಯಕರ್ತರು ವಶಕ್ಕೆ.. ಸ್ಥಳದಲ್ಲಿ ಬಿಗುವಿನ ವಾತಾವರಣ!

author img

By

Published : Jan 5, 2022, 2:24 PM IST

Updated : Jan 5, 2022, 2:32 PM IST

Bajrang Dal workers detained, Bajrang Dal workers detained in Chikmagalur, Bajrang Dal workers detained by police, Karagunda chalo function in Chikmagalur, Chikmagalur news, ಬಜರಂಗದಳ ಕಾರ್ಯಕರ್ತರು ವಶಕ್ಕೆ, ಚಿಕ್ಕಮಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ವಶಕ್ಕೆ, ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ಚಿಕ್ಕಮಗಳೂರಿನಲ್ಲಿ ಕರಗುಂದ ಚಲೋ ಕಾರ್ಯಕ್ರಮ, ಚಿಕ್ಕಮಗಳೂರು ಸುದ್ದಿ,
ಬಜರಂಗದಳ ಕಾರ್ಯಕರ್ತರ ವಶಕ್ಕೆ

ಎನ್.ಆರ್ ಪುರದ ಉಮಾಮಹೇಶ್ವರಿ ದೇವಸ್ಥಾನದ ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ..

ಚಿಕ್ಕಮಗಳೂರು : ಎನ್​ಆರ್ ಪುರ ತಾಲೂಕಿನ ಕರಗುಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದ ಬಜರಂಗದಳ‌ ಕಾರ್ಯಕರ್ತರನ್ನ ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ಉಮಾಮಹೇಶ್ವರಿ ದೇವಸ್ಥಾನದ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬಜರಂಗದಳ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು..

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರುಗುಂದ ಗ್ರಾಮದ ಸರ್ಕಾರಿ ಜಾಗದಲ್ಲಿರುವ ಅಕ್ರಮ ಶಿಲುಬೆ ತೆರವುಗೊಳಿಸುವಂತೆ ಬಜರಂಗದಳದ ಹಮ್ಮಿಕೊಂಡಿದ್ದ ಕರಗುಂದ ಚಲೋ ಪ್ರತಿಭಟನೆಯನ್ನ ಪೊಲೀಸರು ತಡೆದಿದ್ದಾರೆ. ಅಷ್ಟೇ ಅಲ್ಲ, ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಎನ್.ಆರ್ ಪುರದ ಉಮಾಮಹೇಶ್ವರಿ ದೇವಸ್ಥಾನದ ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಬಜರಂಗದಳ ಪ್ರಾಂತ್ಯ ಸಂಚಾಲಕ ಸಕಲೇಶಪುರ ರಘು, ಆರ್.ಡಿ ಮಹೇಂದ್ರ, ಶಶಾಂತ್, ಪುರುಷೋತ್ತಮ್ ಮುಂತಾದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಎನ್​ಆರ್ ಪುರಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಎನ್​ಆರ್ ಪುರ ಪೊಲೀಸರು ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಕಟ್ಟೆಚ್ಚರವಹಿಸಿದ್ದಾರೆ.

Last Updated :Jan 5, 2022, 2:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.