ETV Bharat / state

ರಾಜ್ಯಕ್ಕೆ ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿ: ಸಮಾವೇಶದಲ್ಲಿ ಕೆ.ಎಸ್. ಈಶ್ವರಪ್ಪ ಘೋಷಣೆ

author img

By

Published : Apr 25, 2023, 8:37 PM IST

Updated : Apr 25, 2023, 10:03 PM IST

''ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ಶಾಸಕರಾಗಿ ಪಡೆದಿರುವುದು ನಮ್ಮ ಪುಣ್ಯ. ತನ್ನ ಕ್ಷೇತ್ರ ಬಿಟ್ಟು ಪೂರ್ಣ ಬಹುಮತದ‌ ಸರ್ಕಾರಕ್ಕೆ ಓಡಾಡುತ್ತಿದ್ದಾರೆ. ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರೋದು ನಮ್ಮ ಹೆಮ್ಮೆ. ಅವರು ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದಾರೆ'' ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

Former minister KS Eshwarappa
ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದು ಬಿಜೆಪಿಯ ನಿಲುವು: ಕೆ.ಎಸ್.ಈಶ್ವರಪ್ಪ

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಮುಂದಿನ ಸಿಎಂ ಬಗ್ಗೆ ಈಗಾಗಲೇ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಈಗ ಬಿಜೆಪಿ ಪಕ್ಷದಲ್ಲೂ ಮುಂದಿನ ಸಿಎಂ ಬಗ್ಗೆ ಚರ್ಚೆಯಾಗಲು ಪ್ರಾರಂಭವಾಗಿದೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿ ಆಗಬೇಕು ಎನ್ನುವುದು ಕಾರ್ಯಕರ್ತರ ಒತ್ತಾಸೆಯಾಗಿದೆ. ಇತ್ತೀಚಿಗೆ ಚಿಕ್ಕಮಗಳೂರಿನಲ್ಲಿ ಕೆಲವು ಕಾರ್ಯಕರ್ತರು ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಎನ್ನುವ ಘೋಷಣೆ ಕೇಳಿಬಂದಿದೆ. ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಸ್ವತಃ ಶಾಸಕರೇ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದರು.

ಅದಕ್ಕೆ ಪೂರಕವಾಗಿ ಕಡೂರು ತಾಲೂಕಿನ ನಿಡಘಟ್ಟದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕೆ.ಎಸ್. ಈಶ್ವರಪ್ಪ ಸಹಮತ ವ್ಯಕ್ತಪಡಿಸಿದ ಅವರು, ''ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿಯಾಗಲಿ'' ಎಂದು ಘೋಷಿಸಿದರು. ಸಿ.ಟಿ. ರವಿ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ವೇಳೆ ಕಾರ್ಯಕರ್ತರು ಸಂತೋಷದಿಂದ ಸಂಭ್ರಮಿಸಿದ್ದು, ಈಶ್ವರಪ್ಪ ಹಾಗೂ ಸಿ ಟಿ ರವಿಗೆ ಜೈಕಾರ ಕೂಗಿದ್ದಾರೆ. ''ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ಶಾಸಕರಾಗಿ ಪಡೆದಿರುವುದು ನಮ್ಮ ಪುಣ್ಯ. ತನ್ನ ಕ್ಷೇತ್ರ ಬಿಟ್ಟು ಪೂರ್ಣ ಬಹುಮತದ‌ ಸರ್ಕಾರಕ್ಕೆ ಓಡಾಡುತ್ತಿದ್ದಾರೆ. ಸಿ.ಟಿ. ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರೋದು ನಮ್ಮ ಹೆಮ್ಮೆ. ಸಿ.ಟಿ. ರವಿ ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದಾರೆ'' ಎಂದು ಈಶ್ವರಪ್ಪ ಬಣ್ಣಿಸಿದರು.

ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದು ಬಿಜೆಪಿಯ ನಿಲುವು: ''ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದು ಬಿಜೆಪಿಯ ನಿಲುವು ಆಗಿದೆ. ಶೇ. 2ರಷ್ಟು ಲಿಂಗಾಯತರಿಗೆ ಶೇ.2ರಷ್ಟು ಒಕ್ಕಲಿಗರಿಗೆ ನೀಡಿದ್ದು ಬಿಜೆಪಿ ಪಕ್ಷದ ಬದ್ಧತೆ'' ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಮುಸ್ಲಿಮರ ಮೀಸಲಾತಿ ರದ್ದು ಮಾಡಿದರ ಬಗ್ಗೆ ಸುಪ್ರೀಂ ಕೋರ್ಟ್​ ತಡೆಯಾಜ್ಞೆ ನೀಡಿದೆ. ಆದರೆ, ಇದನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿಲ್ಲ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್​ನಲ್ಲಿ ವಾದ ಮಾಡುತ್ತೇವೆ. ಜನಸಂಖ್ಯೆ ಆಧಾರದ ಮೇಲೆ ಈ ತೀರ್ಮಾನ ಮಾಡಿದ್ದೇವೆ. ಸುಪ್ರೀಂ ಕೋರ್ಟ್​ನಲ್ಲಿ ತಡೆಯಾಜ್ಞೆ ತೆರವುಗೊಂಡ ಬಳಿಕ ನ್ಯಾಯ ಪಡೆಯುತ್ತೇವೆ'' ಎಂದರು.

ಇದನ್ನೂ ಓದಿ: ಮೀಸಲಾತಿ ಹಂಚಿಕೆ ವಿಚಾರದಲ್ಲಿ ಬಿಜೆಪಿ ಸರ್ಕಾರದಿಂದ ಗಿಮಿಕ್: ದಿನೇಶ್​ ಗುಂಡೂರಾವ್

ನನ್ನ ತೀರ್ಮಾನದ ಬಗ್ಗೆ ನೂರರಷ್ಟು ತೃಪ್ತಿಯಿದೆ: ''ಸಿದ್ದರಾಮಯ್ಯನವರಿಗೆ ಬಿಜೆಪಿಯ ಶಿಸ್ತಿನ ಬಗ್ಗೆ ಕಲ್ಪನೆ ಇಲ್ಲ. ರಾಷ್ಟ್ರೀಯ ನಾಯಕರು ಹೇಳಿದ್ದಾರೆ, ನೀನು ಚುನಾವಣೆಗೆ ನಿಲ್ಲುವುದು ಬೇಡ, ಪಕ್ಷದ ಜವಾಬ್ದಾರಿ ನಿರ್ವಹಿಸು ಎಂದು. ಇದರಿಂದ ಶಿಸ್ತಿನ ಸಿಪಾಯಿಯಾಗಿ ಪಕ್ಷದ ಸಂಘಟನೆಯ ಕೆಲಸ ಮಾಡುತ್ತಿದ್ದೇನೆ. ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ, ರಾಜಕೀಯ ನಿವೃತ್ತಿ ತೆಗೆದುಕೊಂಡು ಪಕ್ಷದ ಸಂಘಟನೆ ಮಾಡಲಿ. ಅವರದು ಅವಕಾಶವಾದಿ ರಾಜಕಾರಣ. ಅಧಿಕಾರದ ದಾಹ, ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಸ್ಥಾನವೂ ಇಲ್ಲ, ವಿರೋಧ ಪಕ್ಷವು ಸ್ಥಾನವೂ ಇಲ್ಲ ಎಂದು ಹೇಳಿದರೆ, ಕಾಂಗ್ರೆಸ್ ಪಕ್ಷದಿಂದ ಹೊರಗೆ ಬರುತ್ತಾರೆ. ನನಗೆ ಅಧಿಕಾರ ಬೇಕಿದ್ದರೆ ಅವರ ಬಯಕೆಯಂತೆ ಮಾಡುತ್ತಿದ್ದೆ. ನಾನು ಚುನಾವಣಾ ರಾಜಕೀಯ ನಿವೃತ್ತಿ ತಗೊಂಡಿದ್ದಿನಿ ಅಷ್ಟೇ. ನನ್ನ ತೀರ್ಮಾನದ ಬಗ್ಗೆ ನೂರಕ್ಕೆ ನೂರರಷ್ಟು ತೃಪ್ತಿ ಇದೆ'' ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ: ಈ ಚುನಾವಣೆ ನಿಮ್ಮ ಮಕ್ಕಳ ಭವಿಷ್ಯ ಹಾಗೂ ಸಂಸ್ಕೃತಿ ರಕ್ಷಿಸುವ ಚುನಾವಣೆ: ಪ್ರಿಯಾಂಕಾ ಗಾಂಧಿ

ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ತೀವ್ರ ಆಕ್ರೋಶ: ''ನಿನ್ನೆ, ಇಂದು, ನಾಳೆಯೂ ಹೇಳ್ತೀನಿ ರಾಷ್ಟ್ರದ್ರೋಹಿ ಮುಸ್ಲಿಮರ ಮತ ಬೇಡ. ರಾಷ್ಟ್ರಭಕ್ತ ಮುಸ್ಲಿಮರು ಬಿಜೆಪಿ ಜೊತೆಯೇ ಇದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಿಜೆಪಿಯನ್ನು ಜಾತಿವಾದಿ ಅಂತಾರೆ. ಒಕ್ಕಲಿಗರು ನನ್ನ ಹಿಂದೆ ಬನ್ನಿ ನಾನು ಸಿಎಂ ಆಗ್ತೀನಿ ಅಂತಾರೆ‌ ಡಿಕೆ ಶಿವಕುಮಾರ್ ಅವರು. ಸಿದ್ದರಾಮಯ್ಯನವರೂ ಅದೇ ರೀತಿ. ಸಿದ್ದರಾಮಯ್ಯ- ಡಿಕೆಶಿ ನೇರವಾಗಿ ಜಾತಿ ರಾಜಕಾರಣ ಮಾಡ್ತಿದ್ದಾರೆ. ಬಿಜೆಪಿಗೆ ಕೋಮುವಾದಿ ರಾಜಕಾರಣ ಅಂತಾರೆ ಎಂದು ಈಶ್ವರಪ್ಪ ಕಿಡಿಕಾರಿದರು.

ಇದನ್ನೂ ಓದಿ: ಏಪ್ರಿಲ್​ 28ರಿಂದ ಮೇ 7ರವರೆಗೆ ಕರ್ನಾಟಕದಲ್ಲಿ ಪ್ರಧಾನಿ ಮೋದಿಯಿಂದ ಭರ್ಜರಿ ಮತ ಬೇಟೆ..

Last Updated : Apr 25, 2023, 10:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.