ETV Bharat / state

ಚಿಕ್ಕಮಗಳೂರು: ಕಂದಕಕ್ಕೆ ಉರುಳಿದ ಖಾಸಗಿ ಬಸ್, ಚಾಲಕ ಸೇರಿ ಏಳು ಮಂದಿಗೆ ಗಂಭೀರ ಗಾಯ

author img

By

Published : Mar 24, 2022, 8:17 PM IST

Updated : Mar 25, 2022, 9:31 AM IST

ಬಾಬಾ ಬುಡನ್‌ಗಿರಿಯಿಂದ ಚಿಕ್ಕಮಗಳೂರು ನಗರಕ್ಕೆ ಬರುತ್ತಿದ ವೇಳೆ ಖಾಸಗಿ ಬಸ್‌ವೊಂದು ಇಲ್ಲಿನ ಗಿರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಕಂದಕಕ್ಕೆ ಬಿದ್ದ ಖಾಸಗಿ ಬಸ್
ಕಂದಕಕ್ಕೆ ಬಿದ್ದ ಖಾಸಗಿ ಬಸ್

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ದತ್ತಪೀಠದ ಬಳಿ ನಡೆದಿದೆ. ದಿನ ನಿತ್ಯ ಚಿಕ್ಕಮಗಳೂರಿನಿಂದ ದತ್ತಪೀಠದ ಮಾರ್ಗವಾಗಿ ಸಂಚರಿಸುವ ಎಸ್​​ಎಂಎಸ್ ಟ್ರಾವೆಲ್ಸ್​ ಎಂಬ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದ್ದು, ಡ್ರೈವರ್ ಸೇರಿದಂತೆ ಬಸ್​ನಲ್ಲಿದ್ದ ಏಳು ಜನರಿಗೂ ಗಂಭೀರ ಗಾಯಗಳಾಗಿವೆ.

ಕಂದಕಕ್ಕೆ ಉರುಳಿದ ಖಾಸಗಿ ಬಸ್

ಬಸ್​​​ನಲ್ಲಿ ಏಳು ಮಂದಿ ಪ್ರಯಾಣ ಮಾಡುತ್ತಿದ್ದು, ಅದೃಷ್ಟವಶಾತ್ ದೊಡ್ಡಮಟ್ಟದ ಸಾವು ನೋವು ಸಂಭವಿಸಿಲ್ಲ. ಮಾಹಿತಿ ತಿಳಿದ ಕೂಡಲೇ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ದತ್ತಪೀಠವು ನಾಲ್ಕೈದು ಕಿ.ಮೀ. ದೂರ ಇರುವಾಗಲೇ ಯೂಟರ್ನ್ ಆಕಾರದ ದೊಡ್ಡ-ದೊಡ್ಡ ತಿರುವುಗಳಿದ್ದು, ಲಾಂಗ್ ಚಾರ್ಸಿ ವಾಹನವಾಗಿದ್ದರಿಂದ ಈ ಅನಾಹುತ ಸಂಭವಿಸಿರುವ ಸಾಧ್ಯತೆಯಿದೆ. ಅಲ್ಲದೆ, ದತ್ತಪೀಠ-ಮುಳ್ಳಯ್ಯನಗಿರಿ ಭಾಗದಲ್ಲಿ ಆಗಾಗ್ಗೆ ಮಳೆ ಕೂಡ ಸುರಿಯುತ್ತಿದ್ದು, ಗುಡ್ಡದ ಮಣ್ಣು ರಸ್ತೆಯಲ್ಲಿ ನಿಂತಿದ್ದರಿಂದ ತಿರುವಿನಲ್ಲಿ ಬಸ್ ಟರ್ನ್ ಆಗುವಾಗ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಬಸ್ ರಸ್ತೆ ಬದಿಯ ಸುಮಾರು 50 ಅಡಿ ಆಳದ ಕಂದಕಕ್ಕೆ ಪಲ್ಟಿಯಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ರಕರ್ತೆ ಮೃತದೇಹ ಪತ್ತೆ.. ಪತಿ ಮೇಲೆ ಗುಮಾನಿ

Last Updated :Mar 25, 2022, 9:31 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.