ETV Bharat / state

ಚಿಕ್ಕಮಗಳೂರಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ.. ಕಾರಣ ನಿಗೂಢ

author img

By

Published : Dec 20, 2022, 10:42 PM IST

Updated : Dec 21, 2022, 9:22 AM IST

ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

chikmagalur-two-lovers-committed-suicide
ಚಿಕ್ಕಮಗಳೂರು: ಒಂದೇ ವೇಲ್​ನಿಂದ ಪ್ರೇಮಿಗಳಿಬ್ಬರು ನೇಣಿಗೆ ಶರಣು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಸಮೀಪದ ಗುಲ್ಲನ ಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಜೋಡಿ ಚಿಕ್ಕಮಗಳೂರು ತಾಲೂಕಿನ, ಕಲ್ಲುಗುಡ್ಡೆ ಅಣೂರಿನ ದರ್ಶನ್ ಮತ್ತು ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ.

ಈ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರೇಮಿಗಳ ಮೃತ ದೇಹವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: ಪತ್ನಿಯೊಂದಿಗೆ ಸೇರಿಕೊಂಡು ಮಂತ್ರವಾದಿ ಅಪ್ಪನನ್ನು ಕೊಂದ ಮಗ

Last Updated :Dec 21, 2022, 9:22 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.