ETV Bharat / state

ದತ್ತಪೀಠದಲ್ಲಿ ಮಾಂಸಾಹಾರ ಸೇವನೆ ಅಕ್ಷಮ್ಯ ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಸಿ.ಟಿ. ರವಿ ಆಗ್ರಹ

author img

By

Published : May 16, 2022, 3:07 PM IST

Updated : May 16, 2022, 3:32 PM IST

ದತ್ತಪೀಠ ಆವರಣದಲ್ಲಿ ಮಾಂಸಾಹಾರ ಅಡುಗೆ ಮಾಡಿ,‌ ಸೇವನೆ ಮಾಡಿರುವ ವಿಚಾರ ನಿನ್ನೆ ರಾತ್ರಿ ನನ್ನ ಗಮನಕ್ಕೆ ಬಂದಿದೆ. ಅಲ್ಲಿನ ಜಿಲ್ಲಾಧಿಕಾರಿಗಳಿಗೆ ವಿಡಿಯೋ ಕಳುಹಿಸಿ ಮಾಹಿತಿ ಕೇಳಿದ್ದೇನೆ. ಮಾಂಸಾಹಾರ ಮಾಡಿರೋದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

BJP national general secretary C T Ravi spoke in Kalaburagi
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

ಕಲಬುರಗಿ: ಚಿಕ್ಕಮಗಳೂರಿನ ದತ್ತಪೀಠದಲ್ಲಿ ಹೋಮ - ಹವನ ನಡೆಯುವ ಜಾಗದಲ್ಲಿ ಮಾಂಸಾಹಾರ ಅಡುಗೆ ಮಾಡಿ, ಸೇವನೆ ಮಾಡಿರುವ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಂಸಾಹಾರ ಮಾಡಿರೋದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

ಕಲಬುರಗಿಯಲ್ಲಿ ಮಾತನಾಡಿದ ಸಿ.ಟಿ ರವಿ, ದತ್ತಪೀಠ ಆವರಣದಲ್ಲಿ ಮಾಂಸಾಹಾರ ಅಡುಗೆ ಮಾಡಿ,‌ ಸೇವನೆ ಮಾಡಿರುವ ವಿಚಾರ ನಿನ್ನೆ ರಾತ್ರಿ ನನ್ನ ಗಮನಕ್ಕೆ ಬಂದಿದೆ. ಅಲ್ಲಿನ ಜಿಲ್ಲಾಧಿಕಾರಿಗಳಿಗೆ ವಿಡಿಯೋ ಕಳುಹಿಸಿ ಮಾಹಿತಿ ಕೇಳಿದ್ದೇನೆ. ಮಾಂಸಾಹಾರ ಮಾಡಿರೋದು ಅಕ್ಷಮ್ಯ ಅಪರಾಧ, ಅಲ್ಲಿನ ಜವಾಬ್ದಾರಿ ಯಾರಿಗೆ ನೀಡಲಾಗಿತ್ತೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಾರ ಕುಮ್ಮಕ್ಕು ಇದ್ದರೂ ಕೂಡ ಅಲ್ಲಿ ಆ ರೀತಿ ಆಗದಂತೆ ನೋಡಿಕೊಳ್ಳುವುದು ಜಿಲ್ಲಾಡಳಿತ‌ದ ಜವಾಬ್ದಾರಿ ಆಗಿತ್ತು ಎಂದರು.

ಇದನ್ನು ನಿಯಂತ್ರಿಸುವ ಜವಾಬ್ದಾರಿ ಹೊತ್ತವರು ಈ ಕುರಿತು ಉತ್ತರಿಸಬೇಕು. ಪೀಠದಿಂದ ಮುನ್ನೂರು ಮೀಟರ್ ‌ವ್ಯಾಪ್ತಿಯಲ್ಲಿ ಮಾಂಸಾಹಾರ, ಪ್ರಾಣಿ ಬಲಿಗೆ ನಿಷೇಧವಿದೆ. ಆದರೂ ಕೂಡ ಹೇಗೆ ಅಲ್ಲಿ ಪ್ರಾಣಿಬಲಿ, ಮಾಂಸಾಹಾರ ಮಾಡಿದ್ದಾರೆ ಅನ್ನೋ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಮುಂದೆ ಈ ರೀತಿ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯೋ ಅಗತ್ಯವಿಲ್ಲ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಕುರಿತು ಸಿ.ಟಿ ರವಿ ಪ್ರತಿಕ್ರಿಯೆ

Last Updated : May 16, 2022, 3:32 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.