ETV Bharat / state

ಪಿಎಫ್ಐ ನೆಪಕ್ಕೆ ಮಾತ್ರ ಆರ್​ಎಸ್​ಎಸ್ ಟಾರ್ಗೆಟ್ ಮಾಡುತ್ತಿದೆ: ಸಿ.ಟಿ ರವಿ

author img

By

Published : Oct 4, 2022, 5:58 PM IST

ಪಿಎಫ್ಐ ನೆಪಕ್ಕೆ ಮಾತ್ರ ಆರ್​​ಎಸ್​ಎಸ್​ನ್ನ ಟಾರ್ಗೆಟ್​ ಮಾಡುತ್ತಿದ್ದಾರೆ. ಆದರೆ ಅವರ ಮೂಲ ಉದ್ದೇಶ ಇರೋದು ಮಾತ್ರ ಭಾರತೀಯರು, ಭಾರತೀಯತೆ ಮೇಲೆ ಅವರ ಯುದ್ದದ ಉದ್ದೇಶ ಇಸ್ಲಾಮಿಕ್ ರಾಜ್ಯವನ್ನ ಸ್ಥಾಪನೆ ಮಾಡೋದು ಎಂದು ಹೇಳಿದ್ದಾರೆ.

Kn_ckm_02_P
ಸಿ.ಟಿ ರವಿ

ಚಿಕ್ಕಮಗಳೂರು: ಬಂಟ್ವಾಳದಲ್ಲಿ ರಸ್ತೆ ಮೇಲೆ ಪಿಎಫ್ಐ ಬರಹಕ್ಕೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೆಂಡಾ ಮಂಡಲರಾಗಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಪಿಎಫ್ಐ ಬಗ್ಗೆ ಸಿಟಿ ರವಿ ಪ್ರತಿಕ್ರಿಯೆ

ಪಿಎಫ್ಐ ನವರು ನೆಪಕ್ಕೆ ಮಾತ್ರ ಆರ್​ಎಸ್​ಎಸ್ ಟಾರ್ಗೆಟ್ ಮಾಡುತ್ತಿದ್ದಾರೆ. ಆದರೆ, ಅವರ ಉದ್ದೇಶ ಇರೋದು ಭಾರತೀಯರು, ಭಾರತೀಯತೆ ಮೇಲೆ. ಅವರ ಯುದ್ದದ ಉದ್ದೇಶ ಇಸ್ಲಾಮಿಕ್ ರಾಜ್ಯ ಸ್ಥಾಪನೆ ಮಾಡೋದು. ಅವರ ಮೂಲ ನಂಬಿಕೆಗಳಲ್ಲೇ ಅಸಹಿಷ್ಣತೆಯ ದೋಷವಿದೆ. ಮತ್ತೊಂದು ಮತ, ಧರ್ಮ, ದೇವರನ್ನ ಒಪ್ಪದ ಮಾನಸಿಕತೆಯಿದೆ ಎಂದು ರವಿ ಹರಿಹಾಯ್ದಿದ್ದಾರೆ.

ಪ್ರತಿಯೊಬ್ಬರು ರಾಷ್ಟ್ರೀಯತೆಯನ್ನ ಮೈ ಗೂಡಿಸಿಕೊಳ್ಳುವ ಮೂಲಕ ಅವರನ್ನ ಎದುರಿಸಬೇಕು. ನಿಮ್ಮ ದುಷ್ಟತನದ ಮೂಲಕ ಭಾರತೀಯರನ್ನ ನಾಶ ಮಾಡಿದ ಕಾಲ ಹೋಯ್ತು. ಈಗ ಅಂತಹ ಸಂದರ್ಭ ಬಂದ್ರೆ ನಿಮ್ಮನ್ನ ನಾಶ ಮಾಡಿ ಭಾರತವನ್ನ ಉಳಿಸುತ್ತೇವೆ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಪಿಎಫ್ಐ ಮರಳಿ ಬರುತ್ತೇವೆ.. ಬ್ಯಾನ್​ ಬೆನ್ನಲ್ಲೇ ರಸ್ತೆಯ ಮೇಲೆ ಬಂಟ್ವಾಳದಲ್ಲಿ ಬೆದರಿಕೆ ಸಂದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.