ಚಿಕ್ಕಮಗಳೂರಲ್ಲಿ ಅಚ್ಚರಿ.. ನೇಣು ಹಾಕಿಕೊಂಡ ವರ್ಷದ ಬಳಿಕ ವ್ಯಕ್ತಿ ಮೃತದೇಹ ಪತ್ತೆ!

author img

By

Published : Jan 16, 2022, 8:41 PM IST

Updated : Jan 16, 2022, 9:05 PM IST

chikkamagaluru

ನೇಣಿಗೆ ಶರಣಾಗಿದ್ದ ವ್ಯಕ್ತಿಯ ಮೃತದೇಹ ವರ್ಷದ ಬಳಿಕ ಪತ್ತೆಯಾಗಿರುವ ವಿಚಿತ್ರ ಘಟನೆ ಕಾಫಿನಾಡಿನಲ್ಲಿ ಬೆಳಕಿಗೆ ಬಂದಿದೆ. ಜಯಲಕ್ಷ್ಮಿ ಹಾಲ್​ನ ಮಾಲೀಕರಾದ ಚಂದ್ರ ಮೋಹನ್ ಅವರ ಹಳೆಯ ಮನೆಯಲ್ಲಿ ಈ ಘಟನೆ ನಡೆದಿದೆ.

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ಪಟ್ಟಣದ ಟಿ.ಎಂ ರಸ್ತೆಯಲ್ಲಿರುವ ಹಾಳು ಬಿದ್ದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಒಂದು ವರ್ಷದ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದ್ದು, ಮನೆಯ ಮಾಲೀಕ ಮನೆಯ ದುರಸ್ತಿ ಸಲುವಾಗಿ ಮನೆ ನೋಡಲು ತೆರಳಿದಾಗ ಮೃತದೇಹ ಪತ್ತೆಯಾಗಿದೆ.

dead-body-found-in-chikkamagaluru
ಚಿಕ್ಕಮಗಳೂರಿನಲ್ಲಿ ಮೃತದೇಹ ಪತ್ತೆ

ಜಯಲಕ್ಷ್ಮಿ ಹಾಲ್​ನ ಮಾಲೀಕರಾದ ಚಂದ್ರ ಮೋಹನ್ ಅವರ ಹಳೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಗುರುತು ಈವರೆಗೂ ಪತ್ತೆಯಾಗಿಲ್ಲ.

ಒಂದು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಓದಿ: ರಾಜ್ಯದಲ್ಲಿಂದು 34,047 ಮಂದಿಗೆ ಕೊರೊನಾ, ಸೋಂಕಿನಿಂದ 13 ಸಾವು: ಪಾಸಿಟಿವಿಟಿ ರೇಟ್​ ಶೇ.19..!

Last Updated :Jan 16, 2022, 9:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.