ETV Bharat / state

ಅರಣ್ಯ ಇಲಾಖೆ ಮುಂಭಾಗದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ರೈತ

author img

By

Published : Jun 30, 2020, 5:53 PM IST

farmer drinking poison
ಆತ್ಮಹತ್ಯೆಗೆ ಯತ್ನಿಸಿದ ರೈತ

ವಿಷ ಕುಡಿದ ರೈತ ಕಚೇರಿ ಎದುರು ನರಳಾಟ ನಡೆಸಿದ್ದಾನೆ. ಬಳಿಕ ಈತನನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ರೈತನ ಸ್ಥಿತಿ ಗಂಭೀರವಾಗಿದೆ.

ಚಿಕ್ಕಮಗಳೂರು: ಅರಣ್ಯ ಇಲಾಖೆಯ ಸಿಬ್ಬಂದಿ ಪ್ರತಿ ನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ರೈತನೋರ್ವ ಅರಣ್ಯ ಇಲಾಖೆ ಮುಂಭಾಗದಲ್ಲಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ, ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ.

ವಿಷ ಕುಡಿದ ರೈತ ಕಚೇರಿ ಎದುರು ನರಳಾಟ ನಡೆಸಿದ್ದಾನೆ. ಬಳಿಕ ಈತನನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ರೈತನ ಸ್ಥಿತಿ ಗಂಭೀರವಾಗಿದೆ.

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ರೈತ

ರೈತನ ಮನೆಯಲ್ಲಿದ್ದ ಸಾಗುವಾನಿ ಮರಗಳನ್ನು ಅರಣ್ಯ ಇಲಾಖೆ ಸೀಜ್ ಮಾಡಿದೆ ಎಂದು ಹೇಳಲಾಗುತ್ತಿದ್ದು, ಸಾಗುವಳಿ ಮಾಡಲು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಅಡ್ಡಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.