ETV Bharat / state

ಸಾಲಬಾಧೆ: ನದಿಗೆ ಹಾರಿ ರೈತ ಆತ್ಮಹತ್ಯೆ!

author img

By

Published : Mar 17, 2021, 5:27 PM IST

ನದಿಗೆ ಹಾರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ರಘು ಗೌಡ (55) ಆತ್ಮಹತ್ಯೆಗೆ ಶರಣಾದ ರೈತ.

farmer commits suicide
ಸಾಲಬಾಧೆ: ನದಿಗೆ ಹಾರಿ ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲಬಾಧೆ ಹಾಗೂ ಅತಿವೃಷ್ಟಿಯಿಂದ ಬೆಳೆ ನಷ್ಟವಾದ ಹಿನ್ನೆಲೆ ಮನನೊಂದ ರೈತನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಸಾಲಬಾಧೆ: ನದಿಗೆ ಹಾರಿ ರೈತ ಆತ್ಮಹತ್ಯೆ

ರಘು ಗೌಡ (55) ಆತ್ಮಹತ್ಯೆಗೆ ಶರಣಾದ ರೈತ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಳೆಕೂಡಿಗೆ ಗ್ರಾಮದ ಪಕ್ಕದಲ್ಲಿ ಹರಿಯುವ ಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತ ರಘು ಗೌಡಗೆ 5 ಎಕರೆ ಕಾಫಿ ತೋಟವಿದ್ದು, ಕಳೆದ ವರ್ಷ ಸುರಿದ ಧಾರಾಕಾರ ಮಳೆಯಿಂದ ಕಾಫಿ, ಅಡಿಕೆ, ಮೆಣಸು ಬೆಳೆ ಸಂಪೂರ್ಣ ನಾಶವಾಗಿತ್ತು. ಅಲ್ಲದೇ ಸ್ಥಳೀಯ ಬ್ಯಾಂಕ್ ಹಾಗೂ ಕೈ ಸಾಲ ಸೇರಿದಂತೆ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ. ಈ ಸಾಲದ ಬಗ್ಗೆ ಮನೆಯ ಸದಸ್ಯರಲ್ಲಿಯೂ ರಘು ಗೌಡ ಹೇಳಿಕೊಂಡಿದ್ದು, ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗ್ತಿದೆ.

farmer commits suicide
ಸಾಲಬಾಧೆ: ನದಿಗೆ ಹಾರಿ ರೈತ ಆತ್ಮಹತ್ಯೆ

ಸದ್ಯ ರಘು ಗೌಡ ಮೃತದೇಹವನ್ನು ಸ್ಥಳೀಯ ಈಜುಗಾರ ನಾಗರಾಜ್ ಹೊರ ತೆಗೆದಿದ್ದಾರೆ. ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.