ETV Bharat / state

ಚಿಕ್ಕಮಗಳೂರು: ಅಕ್ರಮ ಶೆಡ್​ಗಳನ್ನ ತೆರವುಗೊಳಿಸಿದ ಅರಣ್ಯ ಇಲಾಖೆ

author img

By

Published : Jul 4, 2020, 6:09 PM IST

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತ್​ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್​​ಗಳನ್ನ ಹರಿಹರಪುರ ಉಪ ಅರಣ್ಯಾಧಿಕಾರಿ ನೇತೃತ್ವದ ತಂಡ ತೆರವು ಮಾಡಿದೆ.

Forest Department Cleared  illegal sheds in Chikkmagalur
ಚಿಕ್ಕಮಗಳೂರು: ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್​ಗಳನ್ನ ತೆರವುಗೊಳಿಸಿದ ಅರಣ್ಯ ಇಲಾಖೆ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತ್​ ವ್ಯಾಪ್ತಿಯ ಸರ್ವೆ ನಂಬರ್​ 20ರ ಸೆಕ್ಷನ್ 4 ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್​​ಗಳನ್ನ ಹರಿಹರಪುರ ಉಪ ಅರಣ್ಯಾಧಿಕಾರಿ ನೇತೃತ್ವದ ತಂಡ ತೆರವು ಮಾಡಿದೆ.

ಚಿಕ್ಕಮಗಳೂರು: ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್​ಗಳನ್ನ ತೆರವುಗೊಳಿಸಿದ ಅರಣ್ಯ ಇಲಾಖೆ

ಕಳೆದ ಕೆಲ ತಿಂಗಳ ಹಿಂದೆ ಈ ಸ್ಥಳದಲ್ಲಿ ಕವಿರಾಜ್ ಎಂಬುವವರು ಶೆಡ್ ನಿರ್ಮಾಣ ಮಾಡಿದ್ದರು. ಆಗ ಹರಿಹರಪುರ ಉಪ ಅರಣ್ಯಾಧಿಕಾರಿ ನೇತೃತ್ವದಲ್ಲಿ ತೆರವು ಮಾಡಲಾಗಿತ್ತು. ಮತ್ತೆ ಅದೇ ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಲಾಗಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮತ್ತೆ ತೆರವು ಮಾಡಿದ್ದಾರೆ.

ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಗ್ರಾಮಸ್ಥರ ಮಾತಿಗೆ ಜಗ್ಗದ ಅರಣ್ಯ ಇಲಾಖೆ ಅಧಿಕಾರಿಗಳು, ಶೆಡ್ ತೆರವು ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.