ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಕಿಸಾನ್​ ಕಾಂಗ್ರೆಸ್​ ಒತ್ತಾಯ

author img

By

Published : Aug 4, 2022, 5:51 PM IST

Kn_ckm_01_Sparde_invite_av_7202347

2023ರ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಿಂದ ಸ್ಪರ್ಧಿಸುವಂತೆ ಕರ್ನಾಟಕ ಕಿಸಾನ್​ ಕಾಂಗ್ರೆಸ್​​ ಒತ್ತಾಯಿಸಿದೆ.

ಚಿಕ್ಕಮಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಕರ್ನಾಟಕ ಕಿಸಾನ್‌ ಕಾಂಗ್ರೆಸ್‌​ ಅಧ್ಯಕ್ಷ ಸಚಿನ್​ ಮಿಗಾ ಅವರು ಸಿದ್ದರಾಮೋತ್ಸವ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ಇಂದಿರಾ ಗಾಂಧಿಗೆ ಪುನರ್ಜನ್ಮ ನೀಡಿದ್ದ ಕ್ಷೇತ್ರವಾದ್ದರಿಂದ ಚಿಕ್ಕಮಗಳೂರಲ್ಲೇ ಸ್ಪರ್ಧಿಸಿ ಮತ್ತೊಮ್ಮೆ ಕಾಂಗ್ರೆಸ್​ ಪಕ್ಷಕ್ಕೆ ನಿಮ್ಮ ಗೆಲುವಿನಿಂದ ಪುನರ್ಜನ್ಮವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ದ ಸ್ಪರ್ಧಿಸುವಂತೆ ಕಿಸಾನ್ ಕಾಂಗ್ರೆಸ್ ಮನವಿ ಮಾಡಿದೆ.

ಇದನ್ನೂ ಓದಿ: ಮೋದಿ ದೂರದೃಷ್ಟಿ ನಾಯಕ, ಅಮಿತ್ ಶಾ ದಕ್ಷ ನಾಯಕ: ಸಿಎಂ ಬೊಮ್ಮಾಯಿ‌ ಬಣ್ಣನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.