ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಸಾವು.. ಪ್ರತಿಭಟಿಸಿದ ಸ್ಥಳೀಯರಿಗೆ ಪೊಲೀಸರ ಲಾಠಿ ಏಟು

author img

By

Published : Sep 9, 2022, 6:48 PM IST

ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ
ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ()

ಮೂಡಿಗೆರೆ ತಾಲೂಕಿನ ಅರಣ್ಯ ಇಲಾಖೆ ಮುಂದೆ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಯ ಶವವಿಟ್ಟು ಜನರು ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಕಾರ್ಮಿಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆ ಮುಂದೆ ಮೃತ ದೇಹವಿಟ್ಟು ಜನರು ಪ್ರತಿಭಟಿಸಿರುವ ಘಟನೆ ನಡೆದಿದೆ.

ಅರಣ್ಯ ಇಲಾಖೆ ಎದುರು ಪ್ರತಿಭಟನೆ: ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ನಿನ್ನೆ ತೋಟದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿಯಿಂದಾಗಿ ಅರ್ಜುನ್‌ ಎಂಬ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಈ ನಿಟ್ಟಿನಲ್ಲಿ ಕೂಡಲೇ ಕಾಡಾನೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿ ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್​: ಈ ವೇಳೆ, ಪ್ರತಿಭಟನಾಕಾರರು ಅರಣ್ಯ ಇಲಾಖೆ ಎದುರು ಶವವನ್ನಿಟ್ಟು ಪ್ರತಿಭಟಿಸಿದರು. ಅಲ್ಲದೇ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಎಷ್ಟೇ ಹರಸಾಹಸ ಪಟ್ಟರೂ ಸಾಧ್ಯವಾಗಿಲ್ಲ. ಹೀಗಾಗಿ, ಪೊಲೀಸರ ಮಾತು ಕೇಳದ ಹಿನ್ನೆಲೆ ಅವರ ಮೇಲೆ ಸಿಬ್ಬಂದಿ ಲಾಠಿಚಾರ್ಜ್‌ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದ್ದಾರೆ.

ಓದಿ: ರಾಮನಗರ: ಕಾಡಾನೆ ದಾಳಿಗೆ ಮಹಿಳೆ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.