ETV Bharat / state

ಮುತ್ತೋಡಿಯ ಅಭಯಾರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಆನೆಮರಿ ಪತ್ತೆ

author img

By

Published : Dec 19, 2020, 6:44 AM IST

ಅರಣ್ಯ ಸಿಬ್ಬಂದಿ ಈ ಭಾಗದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದ್ದು, ವಿಚಾರವನ್ನು ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ..

ಮುತ್ತೋಡಿಯ ಅಭಯಾರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಆನೆಮರಿ ಪತ್ತೆ
Little elephant dead body found in Muthodi forest area at Chikkamagaluru

ಚಿಕ್ಕಮಗಳೂರು : ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಮುತ್ತೋಡಿಯ ವನ್ಯಜೀವಿ ಅಭಯಾರಣ್ಯದಲ್ಲಿ ಮರಿ ಆನೆಯೊಂದು ಕೊಳೆತ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ತಾಲೂಕಿನ ಮುತ್ತೋಡಿ ಅಭಯಾರಣ್ಯದಲ್ಲಿ ಸುಮಾರು ಮೂರರಿಂದ ನಾಲ್ಕು ವರ್ಷದ ಗಂಡಾನೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಈ ಭಾಗದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದ್ದು, ವಿಚಾರವನ್ನು ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಓದಿ: ಆರೋಗ್ಯಾಧಿಕಾರಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌; ಮಂಜುನಾಥ್‌ ಹೇಳಿದ್ದೇನು?

ಸ್ಥಳಕ್ಕೆ ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎನ್ನಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.