ETV Bharat / state

ಬೆದರಿಕೆ ಕರೆ ಮಾಡುವವರು ಹೇಡಿಗಳು : ಸಚಿವ ಈಶ್ವರಪ್ಪ

author img

By

Published : Feb 12, 2022, 7:10 PM IST

ಪೊಲೀಸ್ ಇಲಾಖೆ, ಸಮಾಜ ನಮ್ಮ ಜೊತೆಯಲ್ಲಿದೆ. ಈ ಧೈರ್ಯದ ಮೇಲೆ ನಾವು ಮುಂದೆ ಹೋಗುತ್ತಿದ್ದೇವೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು..

ಸಚಿವ ಈಶ್ವರಪ್ಪ
ಸಚಿವ ಈಶ್ವರಪ್ಪ

ಚಿಕ್ಕಮಗಳೂರು : ಬೆದರಿಕೆ ಕರೆ ಮಾಡುವವರು ಹೇಡಿಗಳು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ ಎಸ್ ಈಶ್ವರಪ್ಪ ಕಿಡಿಕಾರಿದರು.

ಉಡುಪಿ ಶಾಸಕ ರಘುಪತಿ ಭಟ್​​ಗೆ ಬೆದರಿಕೆ ಕರೆ ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಿಂದೆಯಿಂದ ಗುದ್ದು ಕೊಡುತ್ತಾರೆ, ತಾಕತ್ತಿದ್ದರೆ ಮುಂದೆ ಬರಲಿ.

ಶಾಸಕ ರಘುಪತಿ ಭಟ್​​ಗೆ ಬೆದರಿಕೆ ಕರೆ ಬಗ್ಗೆ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ.

ಇಂತಹ ಹೇಡಿಗಳಿಗೆ ನಾವು ಹೆದರಲ್ಲ, ನಮ್ಮ ದೇಶ ಹೇಡಿಗಳಿಗೆ ಬೆಲೆ ಕೊಟ್ಟಿಲ್ಲ. ಈ ರೀತಿಯ ಬೆದರಿಕೆ ಕರೆಗಳು ನನಗೂ ಬಹಳ ಬಂದಿತ್ತು. ಇದನ್ನೆಲ್ಲ ಎದುರಿಸುತ್ತೇವೆ ಅನ್ನೋ ವಿಶ್ವಾಸದಲ್ಲೇ ಈ ಫೀಲ್ಡಿಗೆ ಇಳಿಯಬೇಕು.

ಪೊಲೀಸ್ ಇಲಾಖೆ, ಸಮಾಜ ನಮ್ಮ ಜೊತೆಯಲ್ಲಿದೆ. ಈ ಧೈರ್ಯದ ಮೇಲೆ ನಾವು ಮುಂದೆ ಹೋಗುತ್ತಿದ್ದೇವೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.