ಚಿಕ್ಕಮಗಳೂರು : ಅಕ್ರಮ ಗೋಮಾಂಸ ಅಡ್ಡೆ ಮೇಲೆ ಪೊಲೀಸರ ದಾಳಿ

author img

By

Published : Sep 10, 2022, 10:47 AM IST

Etv Bharatpolice-attack-on-illegal-beef-stall-in-chikkamagaluru

ಮಲೆನಾಡು ಗಿಡ್ಡ ತಳಿಯನ್ನೇ ಗುರಿಯಾಗಿಸಿ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ 76 ಕೆ.ಜಿ ಮಾಂಸ ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ಹಸುಗಳನ್ನು ಮನ ಬಂದಂತೆ ಕಡಿದು ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡ ಮೇಲೆ ಪೊಲೀಸರು ದಾಳಿ ಮಾಡಿರುವ ಪ್ರಕರಣ ಜಿಲ್ಲೆಯ ಕೊಪ್ಪ ತಾಲೂಕಿನ ಶಾಂತಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶರೀಫ್ ಎಂಬುವರ ಮನೆಯಲ್ಲಿ 76 ಕೆ.ಜಿ ಗೋಮಾಂಸ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಖಚಿತ ಮಾಹಿತಿ ಮೇರೆಗೆ ಕೊಪ್ಪ ಪೊಲೀಸರು ದಾಳಿ ನಡೆಸಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಕಿಡಿಗೇಡಿಗಳು ಮಾಂಸಕ್ಕಾಗಿ ಮಲೆನಾಡು ಗಿಡ್ಡ ತಳಿಯ ಹಸುಗಳನ್ನೇ ಗುರಿಯಾಗಿಸಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಆನೇಕಲ್​ನಲ್ಲಿ ಪುಡಿ ರೌಡಿಯಿಂದ ಮಾರಣಾಂತಿಕ ಹಲ್ಲೆ, ವೃದ್ಧ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.