ETV Bharat / state

ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಐವರು ಸಾವು, 7 ಮಂದಿಗೆ ಗಾಯ

author img

By

Published : Dec 27, 2020, 6:51 AM IST

Updated : Dec 27, 2020, 10:16 AM IST

ಭೀಕರ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತ

06:41 December 27

ಬಸ್ - ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡ ಘಟನೆ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ.

ಬಿ.ಜಿ.ಕೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ

ಚಿತ್ರದುರ್ಗ: ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ.

ತಿಮ್ಮಣ್ಣ (40), ರತ್ನಮ್ನ (38), ಮಹೇಶ್ (19), ದುರ್ಗಪ್ಪ (16) ಮತ್ತು 55 ವರ್ಷದ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಿಂಗಸುಗೂರಿನಿಂದ ಬೆಂಗಳೂರಿಗೆ ಕ್ರೂಸರ್ ತೆರಳುತ್ತಿದ್ದ ವೇಳೆ ಬೆಂಗಳೂರಿನಿಂದ ಲಿಂಗಸುಗೂರಿನತ್ತ ಬರುತ್ತಿದ್ದ ಬಸ್​ಗೆ ಡಿಕ್ಕಿಯಾಗಿದೆ. ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕುರಿತು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೊಳಕಾಲ್ಮೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated :Dec 27, 2020, 10:16 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.