ETV Bharat / state

ಕುಡಿದು ಗಲಾಟೆ ಮಾಡುತ್ತಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಚೂರಿಯಿಂದ ಇರಿದ ಕುಡುಕ

author img

By

Published : Feb 18, 2020, 9:36 PM IST

ಕುಡಿದು ಗಲಾಟೆ ಮಾಡುತ್ತಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಕುಡುಕನೋರ್ವ ಚೂರಿಯಿಂದ ಇರಿದ ಘಟನೆ ಕೊಳ್ಳೇಗಾಲ ತಾಲೂಕಿನ‌ ಆಲನಹಳ್ಳಿಯಲ್ಲಿ ನಡೆದಿದೆ.

drunkard stabbed with a knife
ಕುಡಿದು ಗಲಾಟೆ ಮಾಡುತ್ತಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಚೂರಿ ಇರಿತ

ಚಾಮರಾಜನಗರ: ಕುಡಿದು ಗಲಾಟೆ ಮಾಡುತ್ತಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಕುಡುಕನೋರ್ವ ಚೂರಿಯಿಂದ ಇರಿದ ಘಟನೆ ಕೊಳ್ಳೇಗಾಲ ತಾಲೂಕಿನ‌ ಆಲನಹಳ್ಳಿಯಲ್ಲಿ ನಡೆದಿದೆ.

ಅದೇ ಗ್ರಾಮದ ತೋಟೇಶ್ (45) ಹಲ್ಲೆಗೊಳಗಾದ ವ್ಯಕ್ತಿ. ಕುಡಿದು ಬಂದು ಗ್ರಾಮದಲ್ಲಿ ಗಲಾಟೆ ಮಾಡುತ್ತಿದ್ದ ಅಜಯ್​ (27)ನನ್ನು ಯಾಕೆ ಕುಡಿದು ಗಲಾಟೆ ಮಾಡುತ್ತಿದ್ದೀಯಾ ಎಂದಿದ್ದಕ್ಕೆ ಏಕಾಏಕಿ ಚೂರಿ ಇರಿದು ಹಲ್ಲೆ ನಡೆಸಿದ್ದಾನೆ ಎನ್ನಲಾಗ್ತಿದೆ. ತೋಟೇಶ ಹಾಗೂ ಅಜಯ್​​ಗೂ ಹಳೇ ವೈಷಮ್ಯ ಕೂಡ ಇತ್ತು ಎಂದು ತಿಳಿದು ಬಂದಿದೆ. ರಕ್ತದ ಮಡುವಿನಲ್ಲಿದ್ದ ತೋಟೇಶ್​ನನ್ನು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಅಜಯ್ ಪರಾರಿಯಾಗಿದ್ದಾನೆ.

ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.