ಮುರುಘಾ ಶರಣರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

author img

By

Published : Sep 27, 2022, 8:35 PM IST

ಮುರುಘಾ ಮಠದ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ

ಮುರುಘಾ ಮಠದ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್​ ಅ.10ರವರೆಗೆ ವಿಸ್ತರಿಸಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಹಾಗೇ ಎ 2 ಆರೋಪಿ ರಶ್ಮಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯಗೊಳ್ಳಲಿತ್ತು. ಈ ಹಿನ್ನೆಲೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​​ ಕೋರ್ಟ್​​ ಇಂದು ಮತ್ತೆ 14 ದಿನಗಳ ಕಾಲ ಸ್ವಾಮೀಜಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೋಕ್ಸೊ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿ ಶರಣರನ್ನು ಬಂಧಿಸಲಾಗಿದೆ.

(ಓದಿ: ಮುರುಘಾಶ್ರೀಗಳಿಗೆ ಆ್ಯಂಜಿಯೋಗ್ರಾಂ ಶಸ್ತ್ರಚಿಕಿತ್ಸೆ ಯಶಸ್ವಿ... ಆಸ್ಪತ್ರೆಯಿಂದ ಡಿಸಾರ್ಜ್)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.