ETV Bharat / state

Chitradurga accident: ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ ಐವರ ದುರ್ಮರಣ

author img

By

Published : Aug 13, 2023, 9:24 AM IST

Updated : Aug 13, 2023, 6:18 PM IST

Road Accident at Chitradurga
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ

Chitradurga Accident: ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐವರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ.

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ

ಚಿತ್ರದುರ್ಗ/ವಿಜಯಪುರ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ವಿಜಯಪುರ ಜಿಲ್ಲೆಯ ಬಸನವಬಾಗೇವಾಡಿ ತಾಲೂಕಿನ ಕುದರಿ ಸಾಲೋಟಗಿ ಗ್ರಾಮದ ಐವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇಂದು ನಸುಕಿನ ಜಾವ ದುರ್ಘಟನೆ ನಡೆದಿದೆ.

ದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮತ್ತು ಓರ್ವ ಸ್ನೇಹಿತ ಮೃತಪಟ್ಟಿದ್ದಾನೆ. ಕುದರಿಸಾಲವಾಡಗಿ ಗ್ರಾಮದ ಎಸ್. ಕೆ.ಎಸ್ ಭಾರತ ಫೈನಾನ್ಸ್​ ನೌಕರ ಸಂಗನಬಸವ ಮಲ್ಲಣ್ಣ ವಂದಾಲ (36), ಅವರ ಪತ್ನಿ ರೇಖಾ ಸಂಗನಬಸವ ವಂದಾಲ(29), ಪುತ್ರ ಅಗಸ್ತ್ಯ (7) ಹಾಗೂ ಸಹೋದರ ಸಂಬಂಧಿ ಯಾಳಗಿ ಗ್ರಾಮದ ಭೀಮಾಶಂಕರ ವಂದಾಲ (28) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಭೀಮಾಶಂಕರ ಗೆಳೆಯ ಮದುಸೂಧನ (28) ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ನಿವಾಸಿಗಳಾದ ಖಾಸಗಿ ಬ್ಯಾಂಕ್​​ ನೌಕರರಾಗಿರುವ ಸಂಗನಬಸವ, ಅವರ ಪತ್ನಿ ರೇಖಾ, ಮಕ್ಕಳಾದ ಅಗಸ್ತ್ಯ, ಆದರ್ಶ್, ಪುತ್ರಿ ಅನ್ವಿಕಾ ಹಾಗೂ ಸಂಬಂಧಿ ಭೀಮಾಶಂಕರ್ ಮತ್ತು ಸ್ನೇಹಿತ ಮದುಸೂಧನ್ ಹಾಗೂ ಕಾರು ಚಾಲಕ ಎಲ್ಲರೂ ಸೇರಿಕೊಂಡು ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಮನೆಯಿಂದ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ವಿಜಯಪುರದಿಂದ ಕಾರಿನಲ್ಲಿ ಹೊರಟಿದ್ದರು.

chitradurga accident
ಭೀಮಾಶಂಕರ, ಸಂಗನಬಸವ, ರೇಖಾ

ಇದನ್ನೂ ಓದಿ: ತುಮಕೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು.. ಓರ್ವನ ಸ್ಥಿತಿ ಗಂಭೀರ

ಭಾನುವಾರ ಬೆಳಗಿನ ಜಾವ 3:30ರ ವೇಳೆಗೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಸಂಗನಬಸವ, ರೇಖಾ, ಅಗಸ್ತ್ಯ, ಭೀಮಾಶಂಕರ್ ಮತ್ತು ಮದುಸೂಧನ ಮೃತಪಟ್ಟಿದ್ದಾರೆ. ಆದರ್ಶ್, ಅನ್ವಿಕಾ ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ನಡೆದ ಸ್ಥಳಕ್ಕೆ‌ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ. ಪರಶುರಾಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕುದರಿಸಾಲವಾಡಗಿ ಗ್ರಾಮದಲ್ಲಿ ಶೋಕಮಡುಗಟ್ಟಿದೆ.

ಇದನ್ನೂ ಓದಿ: ಓವರ್‌ಟೇಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬೈಕ್ ಸವಾರ: ಸಿಸಿಟಿವಿ ದೃಶ್ಯ

ತಾಯಿ - ಮಗ ಸಾವು: ಕೆಎಸ್​ಆರ್​ಟಿಸಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಿನ್ನೆ (ಶನಿವಾರ) ನಡೆದಿತ್ತು. ಕಾರಿನಲ್ಲಿದ್ದ ಬೆಂಗಳೂರಿನ ಪೂಜಾ ಹಿರೇಮಠ್​(42), ಪುತ್ರ ನಿರಂಜನ್​(12) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಶಿವಯೋಗಯ್ಯ ಗಂಭೀರವಾಗಿ ಗಾಯಗೊಂಡಿದ್ದರು.

ಸಕಲೇಶಪುರದಿಂದ ಮೂಡಿಗೆರೆಗೆ ಬರುತ್ತಿದ್ದ ಸಾರಿಗೆ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನ ಮಧ್ಯೆ ಈ ಅಪಘಾತ ಸಂಭವಿಸಿತ್ತು. ಕಾರಿನಲ್ಲಿ ಶಿವಯೋಗಯ್ಯ ದಂಪತಿ ತೆರಳುತ್ತಿದ್ದರು. ಅಪಘಾತದಲ್ಲಿ ಪತ್ನಿ ಪೂಜಾ ಹೀರೇಮಠ್, ಪುತ್ರ ನಿರಂಜನ್​ ಸ್ಥಳದಲ್ಲೇ ಮೃತಪಟ್ಟಿದ್ದು, ಪತಿ ಶಿವಯೋಗಯ್ಯ ಗಂಭೀರವಾಗಿ ಗಾಯಗೊಂಡಿದ್ದರು. ಇವರಿಗೆ ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ​

ಇದನ್ನೂ ಓದಿ: ಚಿಕ್ಕಮಗಳೂರು : ಕೆಎಸ್​ಆರ್​ಟಿಸಿ ಬಸ್​ ಮತ್ತು ಕಾರ್​ ಮಧ್ಯೆ ಡಿಕ್ಕಿ.. ತಾಯಿ - ಮಗ ಸಾವು

Last Updated :Aug 13, 2023, 6:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.