ETV Bharat / state

ಕೋಟೆನಾಡಲ್ಲಿ ವರುಣನ ಆರ್ಭಟಕ್ಕೆ ತತ್ತರಿಸಿದ ಜನಜೀವನ

author img

By

Published : Jun 6, 2022, 10:29 AM IST

Updated : Jun 6, 2022, 1:04 PM IST

ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆ
ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆ

ಚಿತ್ರದುರ್ಗ ಜಿಲ್ಲೆ ಮಳೆಗೆ ತತ್ತರಿಸಿದೆ. ತಡರಾತ್ರಿ ಸುರಿದ ಭಾರಿ ಮಳೆಯಿಂದ ಜನರು ಹೈರಾಣಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಜೊತೆಗೆ ಜಿಲ್ಲೆಯ ಏಕೈಕ ಜೀವನಾಡಿಯಾಗಿರುವ ವಾಣಿ ವಿಲಾಸ ಜಲಾಶಯಕ್ಕೆ 5,300 ಕ್ಯೂಸೆಕ್ ಒಳಹರಿವು ಹೆಚ್ಚಿದೆ.

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಹಿರಿಯೂರು ನಗರ ಸೇರಿದಂತೆ ತಾಲೂಕಿನ ಬಹುತೇಕ ಕಡೆ ಭಾರಿ ಮಳೆಯಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ನಗರದ ಸಿಎಂ ಬಡಾವಣೆಯ ಅಂಬೇಡ್ಕರ್ ಶಾಲೆ ಬಳಿ ಅನೇಕ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಾತ್ರಿಕೇನಹಳ್ಳಿ ಚೆಕ್ ಡ್ಯಾಂ ತುಂಬಿ ಭೋರ್ಗರೆಯುತ್ತಿದ್ದರೆ ಮತ್ತೊಂದೆಡೆ, ಮದ್ದೇರು ಹಳ್ಳ ಸಹ ತುಂಬಿ ಹರಿಯುತ್ತಿದೆ. ಜಿಲ್ಲೆಯ ಏಕೈಕ ಜೀವನಾಡಿಯಾಗಿರುವ ವಾಣಿ ವಿಲಾಸ ಜಲಾಶಯಕ್ಕೆ 5,300 ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 120.60 ಅಡಿ ಇದೆ. ಇಂದು ಸಹ ಮಳೆಯಾಗುವ ಸಾಧ್ಯತೆ ದಟ್ಟವಾಗಿದ್ದು, ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚು ಮಳೆಯಾದ್ರೆ ವಿವಿ ಸಾಗರ ಡ್ಯಾಂಗೆ ನೀರು ಹರಿದು ಬರುವ ನಿರೀಕ್ಷೆಯಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆ

ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಗಾಳಿ, ಮಳೆಗೆ ಜಿಯೋ ಟವರ್ ಮುರಿದು ಬಿದ್ದಿದೆ. ಟವರ್ ಬಿದ್ದ ಹಿನ್ನೆಲೆ ಪಕ್ಕದಲ್ಲಿದ್ದ ಅಂಗಡಿಯೊಂದು ಜಖಂಗೊಂಡಿದೆ. ಅಂಗಡಿಯಲ್ಲಿ ಯಾರೂ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಉಳಿದಂತೆ ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು, ಚಿತ್ರದುರ್ಗ ಭಾಗದಲ್ಲೂ ಹೆಚ್ಚು ಮಳೆಯಾಗಿರುವ ಕುರಿತು ವರದಿಯಾಗಿದೆ.

ಇದನ್ನೂ ಓದಿ: ಜಲಪಾತಗಳು ಎಷ್ಟು ಸುಂದರವೋ ಅಷ್ಟೇ ಅಪಾಯಕಾರಿ

Last Updated :Jun 6, 2022, 1:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.