ETV Bharat / state

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಒನಕೆ ಪ್ರದರ್ಶನ

author img

By

Published : Feb 3, 2021, 1:27 PM IST

ಒನಕೆ ಪ್ರದರ್ಶನ
ಒನಕೆ ಪ್ರದರ್ಶನ

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಿಳೆಯರು ಒನಕೆ ಪ್ರದರ್ಶನ ನಡೆಸಿದರು‌.‌

ಚಿತ್ರದುರ್ಗ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಿಳೆಯರು ಒನಕೆ ಚಳವಳಿ ನಡೆಸಿದರು‌.‌

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಒನಕೆ ಪ್ರದರ್ಶನ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಮಹಿಳೆಯರು ಒನಕೆ ಪ್ರದರ್ಶನ ಮಾಡುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ವೇಳೆ, ಮೀಸಲಾತಿ ನೀಡದಿದ್ದರೆ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ನೀಡಿದ್ದ ಅನುದಾನವನ್ನು ವಾಪಸ್ ಸರ್ಕಾರಕ್ಕೆ ನೀಡುವುದಾಗಿ ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದರು.

ಇಂದಿನ‌ ಪಾದಯಾತ್ರೆಯಲ್ಲಿ ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದು, ಚಿತ್ರದುರ್ಗ ನಗರದಿಂದ ಬೆಂಗಳೂರಿನತ್ತ ಪಂಚಮಸಾಲಿ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಮುಂದುವರಿದಿದೆ. ಪಾದಯಾತ್ರೆಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ , ಬಿ.ಆರ್ ಪಾಟೀಲ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.