ETV Bharat / state

ಹಿರಿಯೂರು ಬಳಿ ಸರಣಿ ಅಪಘಾತ: ಓರ್ವ ಸಾವು, ಮೂವರು ಗಂಭೀರ

author img

By

Published : Jan 7, 2021, 11:44 AM IST

ಸರಣಿ ಅಪಘಾತ
ಸರಣಿ ಅಪಘಾತ

ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್​ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ: ಸರಣಿ ಅಪಘಾತವಾದ ಹಿನ್ನೆಲೆ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್​ ಬಳಿ ನಡೆದಿದೆ.

ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರುಗಳು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯ ವಿಳಾಸವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

ಇನ್ನು ಗಾಯಾಳುಗಳನ್ನು ಹಿರಿಯೂರು ತಾಲೂಕು​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ‌. ಹಿರಿಯೂರು ಗ್ರಾಮಾಂತರ ಪೊಲೀಸ್ ​ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.