ETV Bharat / state

ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಹರಿದ ಕಾರು: ಪಾದಚಾರಿ ಸ್ಥಳದಲ್ಲೇ ಸಾವು- ವಿಡಿಯೋ

author img

By

Published : Jan 6, 2021, 9:08 AM IST

ನುಲೇನೂರು ಗೇಟ್ ಬಳಿ ಭೀಕರ ರಸ್ತೆ ಅಪಘಾತ
ನುಲೇನೂರು ಗೇಟ್ ಬಳಿ ಭೀಕರ ರಸ್ತೆ ಅಪಘಾತ

ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಚಾರಿ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಕಾರು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗೇಟ್ ಬಳಿ ನಡೆದಿದೆ.

ನುಲೇನೂರು ಗೇಟ್ ಬಳಿ ಭೀಕರ ರಸ್ತೆ ಅಪಘಾತ

ಬೊರೇನಹಳ್ಳಿ ಗ್ರಾಮದ ರಾಮಪ್ಪ ( 51) ಮೃತ ವ್ಯಕ್ತಿ. ರಾತ್ರಿ ವೇಳೆ ಮನೆಗೆ ಹೋಗಲೆಂದು ರಸ್ತೆ ದಾಟುತ್ತಿರುವಾಗ ವೇಗವಾಗಿ ಬಂದ ಕಾರೊಂದು ರಾಮಪ್ಪನವರಿಗೆ ಗುದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ರಸ್ತೆ ಸುರಕ್ಷತೆ ಕುರಿತು ಸೂಕ್ತ ಕ್ರಮ ಕೈಗೊಳ್ಳದಿರುವುದರಿಂದ ದುರಂತ ಸಂಭವಿಸಿದೆ ಎಂದು ಬೋರೆನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.