ETV Bharat / state

ಮೊಳಕಾಲ್ಮೂರಲ್ಲಿ ಅಬಕಾರಿ ಅಧಿಕಾರಿಗಳ ದಾಳಿ... 1.8 ಕೆಜಿ ಗಾಂಜಾ ವಶ

author img

By

Published : Feb 9, 2020, 12:16 PM IST

ಗಾಂಜಾ ಅಡ್ಡೆ ಮೇಲೆ ದಾಳಿ
Police arrested accused

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪೂರ ಗ್ರಾಮದಲ್ಲಿ ಅಬಕಾರಿ ಅಧೀಕ್ಷಕ ಹಾಗೂ ರಾಜ್ಯ ವಿಚಕ್ಷಣದಳ ಮುಖ್ಯಸ್ಥ ಮೋತಿಲಾಲ್ ​ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿ, 1.8 ಕೆಜಿ ಒಣ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಚಿತ್ರದುರ್ಗ: ಗಾಂಜಾ ಅಡ್ಡೆ ಮೇಲೆ ದಾಳಿ ನಡೆಸಿ 1.8 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪೂರ ಗ್ರಾಮದಲ್ಲಿ ನಡೆದಿದೆ.

ಪ್ರಕಾಶ್ ಬಂಧಿತ ಆರೋಪಿ. ಅಬಕಾರಿ ಅಧೀಕ್ಷಕ ಹಾಗೂ ರಾಜ್ಯ ವಿಚಕ್ಷಣದಳ ಮುಖ್ಯಸ್ಥ ಮೋತಿಲಾಲ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ 1.8 ಕೆಜಿ ಒಣ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಗಾಂಜಾ ಮಾರುತ್ತಿದ್ದ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ರಾಜ್ಯ ವಿಚಕ್ಷಣ ದಳದಿಂದ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.