ಮುರುಘಾ ಶ್ರೀಗಳಿಗೆ ಎದೆ ನೋವು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು

author img

By

Published : Sep 2, 2022, 9:24 AM IST

Updated : Sep 2, 2022, 3:45 PM IST

ಮುರುಘಾ ಶ್ರೀಗಳಿಗೆ ಎದೆ ನೋವು

ಗುರುವಾರ ತಡರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಇಲ್ಲಿನ ಕೋರ್ಟ್‌ ಈಗಾಗಲೇ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದರ ಮಧ್ಯೆ ಅವರಿಗೆ ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡಿದ್ದು ಇಂದು ಆಸ್ಪತ್ರೆಗೆ ದಾಖಲಿಸಲಾಯಿತು.

ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ತಕ್ಷಣವೇ ಅವರನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಇಂದು ಬೆಳಗ್ಗೆ ಶ್ರೀಗಳ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಾಸ ಕಾಣಿಸಿಕೊಂಡಿದೆ. ಹೀಗಾಗಿ, ಜೈಲು ಸಿಬ್ಬಂದಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆತಂದರು. ಬೆಳಗ್ಗೆ ಜೈಲು ಸಿಬ್ಬಂದಿ ಮಾತ್ರೆ ಹಾಗೂ ಟೂತ್​ ಬ್ರೆಷ್​​, ಬಟ್ಟೆ ನೀಡಿದ್ದಾರೆ. ಇದಾದ ಕೆಲಹೊತ್ತಿನ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ತಡರಾತ್ರಿ 3 ಗಂಟೆಗೆ ಅವರು ಜೈಲಿಗೆ ಬಂದಿದ್ದು ಸರಿಯಾಗಿ ನಿದ್ದೆ ಮಾಡಿರಲಿಲ್ಲ ಎಂದು ತಿಳಿದುಬಂದಿದೆ.

ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ: ಜಿಲ್ಲಾಸ್ಪತ್ರೆಯಲ್ಲಿ ಮೂವರು ವೈದ್ಯರ ನೇತೃತ್ವದಲ್ಲಿ ಶ್ರೀಗಳ ಆರೋಗ್ಯ ತಪಾಸಣೆ ನಡೆಯುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆ ಶಿಫ್ಟ್ ಮಾಡಿ ಎಂದು ಡಿಸ್ಟ್ರಿಕ್ಟ್ ಸರ್ಜನ್ ಡಾ.ಬಸವರಾಜ್ ಹೇಳಿದ್ದಾರೆ ಎಂದು ​ಅಡ್ವೋಕೆಟ್ ಉಮೇಶ್ ಮಾಹಿತಿ ನೀಡಿದರು.

ಮುರುಘಾ ಶ್ರೀಗಳಿಗೆ ಎದೆ ನೋವು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು

ಇದನ್ನೂ ಓದಿ: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ

Last Updated :Sep 2, 2022, 3:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.