ಉಳ್ಳಾಲ(ದಕ್ಷಿಣ ಕನ್ನಡ): ಬೆಂಗಳೂರಿಂದ ಮಂಗಳೂರಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಲ್ಲಿ ಸಾಗಿಸಲಾಗುತ್ತಿದ್ದ 2 ಲಕ್ಷ ಮೌಲ್ಯದ ಎಮ್ಡಿಎಮ್ಎ ಮತ್ತು ಗಾಂಜವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೊಯ್ದಿನ್ ಹಫೀಜ್ (36), ಮಹಮ್ಮದ್ ಸಿರಾಜ್ (43), ಇಕ್ಬಾಲ್ (30) ಮಹಮದ್ ಅಝೀಜ್ (33) ಬಂಧಿತರು.
ಬಂಧಿತರಿಂದ 2,10,000 ಮೌಲ್ಯದ ನಿಷೇಧಿತ 4 ಕೆಜಿ ಗಾಂಜಾ, 40 ಗ್ರಾಂ. ಎಮ್ಡಿಎಮ್ಎ ಮತ್ತು 2 ಲಕ್ಷ ಮೌಲ್ಯದ ಅಲ್ಟೋ ಕಾರು ವಶ ಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಪ್ರತ್ಯೇಕ ಅಪಘಾತ: ಮೈಲಾರ ಮಲ್ಲಣ್ಣ ದರ್ಶನದಿಂದ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸೇರಿ ಮೂವರ ಸಾವು