ETV Bharat / state

ಸಾಮಾನ್ಯ ಕಾರ್ಯಕರ್ತನೂ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷನಾಗಲು ಸಾಧ್ಯ.. ನಳೀನ್​ ಕುಮಾರ್​ ಕಟೀಲ್​

author img

By

Published : Oct 12, 2019, 11:21 PM IST

ಸಾಮಾನ್ಯ ಕಾರ್ಯಕರ್ತನೂ ರಾಜ್ಯಾಧ್ಯಕ್ಷನಾಗುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದರು.

bjp-will-next-assembly-election-win-the-150-seats

ಸುಳ್ಯ: ಸಾಮಾನ್ಯ ಕಾರ್ಯಕರ್ತನೂ ರಾಜ್ಯಾಧ್ಯಕ್ಷನಾಗುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ರಾಜ್ಯಾಧ್ಯಕ್ಷ ಎಂಬುದು ಇಲ್ಲಿ ಹುದ್ದೆಯಲ್ಲ, ಮಹತ್ತರವಾದ ಜವಾಬ್ದಾರಿ. ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರ ನಂಬಿಕೆಗೆ ದ್ರೋಹ ಬಗೆಯುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದರು.

ಸುಳ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಲೋಕಸಭೆಯಲ್ಲಿ 64 ಪಕ್ಷಗಳ ಪ್ರತಿನಿಧಿಗಳಿದ್ದಾರೆ. ಇದರಲ್ಲಿ 63 ಪಕ್ಷಗಳೂ ವಂಶ ಪಾರಂಪರ್ಯ ಮತ್ತು ಜಾತಿಯ ಆಧಾರದಲ್ಲಿ ಆಯ್ಕೆ ನಡೆಸುತ್ತಿದ್ರೇ, ಬಿಜೆಪಿ ಮಾತ್ರ ಪ್ರಜಾಪ್ರಭುತ್ವದ ಆಧಾರದಲ್ಲಿ ಆಯ್ಕೆ ಮಾಡುತ್ತದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್..​

ಮುಂದಿನ ಮೂರು ವರ್ಷ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಹದಿನೈದು ಸ್ಥಾನಗಳನ್ನೂ ಗೆಲ್ಲಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೂರೈವತ್ತಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಹಿರಿಯರ ಮಾರ್ಗದರ್ಶನ ಮತ್ತು ಕಾರ್ಯಕರ್ತರ ಬೆಂಬಲದೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ಅವರು ಹೇಳಿದರು.

Intro:
ಸುಳ್ಯ

ಪಕ್ಷಗಳಲ್ಲೇ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ರಾಜ್ಯಾಧ್ಯಕ್ಷನಾಗುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ.ರಾಜ್ಯಾಧ್ಯಕ್ಷ ಎಂಬುದು ಇಲ್ಲಿ ಹುದ್ದೆಯಲ್ಲ, ಅದು ಅತ್ಯಂತ ಮಹತ್ತರವಾದ ಜವಾಬ್ಧಾರಿ. ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರ ನಂಬಿಕೆಗೆ ದ್ರೋಹ ಮಾಡದಂತೆ ಆ ಜವಾಬ್ದಾರಿಯನ್ನು ನಾನು ನಿರ್ವಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ರವರು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುಳ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಲೋಕಸಭೆಯಲ್ಲಿ 64 ಪಕ್ಷಗಳ ಪ್ರತಿನಿಧಿಗಳಿದ್ದಾರೆ.ಇದರಲ್ಲಿ 63 ಪಕ್ಷಗಳೂ ವಂಶ ಪಾರಂಪರ್ಯ ಮತ್ತು ಜಾತಿಯ ಆಧಾರದಲ್ಲಿ ಆಯ್ಕೆ ನಡೆಸುತ್ತಿದ್ದರೆ, ಬಿಜೆಪಿ ಮಾತ್ರ ಪ್ರಜಾಪ್ರಭುತ್ವದ ಆಧಾರದಲ್ಲಿ ಆಯ್ಕೆ ನಡೆಸುತ್ತದೆ ಎಂದು ಅವರು ಹೇಳಿದರು.

ಮುಂದಿನ ಮೂರು ವರ್ಷ ಬಿಜೆಪಿ ಸರಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಹದಿನೈದಕ್ಕೆ ಹದಿನೈದು ಸ್ಥಾನಗಳನ್ನೂ ಗೆಲ್ಲಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೂರೈವತ್ತು ಪ್ಲಸ್ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ಹೇಳಿದರು‌. ಹಿರಿಯರ ಮಾರ್ಗದರ್ಶನ ಮತ್ತು ಕಾರ್ಯಕರ್ತರ ಬೆಂಬಲದೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ಅವರು ಹೇಳಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಎ.ವಿ.ತೀರ್ಥರಾಮ, ನ.ಪಂ. ಮಾಜಿ ಅಧ್ಯಕ್ಷರಾದ ಎನ್.ಎ. ರಾಮಚಂದ್ರ, ಪ್ರಕಾಶ್ ಹೆಗ್ಡೆ, ಪ್ರಮುಖರಾದ ಪಿ.ಕೆ. ಉಮೇಶ್, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಹರೀಶ್ ಕಂಜಿಪಿಲಿ ಮತ್ತಿತರರು ಉಪಸ್ಥಿತರಿದ್ದರುBody:ನಳಿನ್ ಕುಮಾರ್ ಕಟೀಲ್, ಗೆ ಸ್ವಾಗತConclusion:ಪ್ರಕಾಶ್ ಕಡಬ,ಸುಳ್ಯ(ಮಂಗಳೂರು)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.