ETV Bharat / state

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ಉಗ್ರ ಶಾರಿಕ್ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್​

author img

By

Published : Dec 17, 2022, 12:34 PM IST

Updated : Dec 17, 2022, 3:10 PM IST

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರ ಶಾರಿಕ್​ನನ್ನು ಮಂಗಳೂರಿನಿಂದ ಬೆಂಗಳೂರು ಆಸ್ಪತ್ರೆಗೆ ಶನಿವಾರ ಶಿಫ್ಟ್ ಮಾಡಲಾಗಿದೆ.

sharik
ಗಾಯಾಳು ಶಾರೀಕ್

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಉಗ್ರ ಶಾರಿಕ್ ನನ್ನು ಬೆಂಗಳೂರು ಆಸ್ಪತ್ರೆಗೆ ಶನಿವಾರ ಶಿಫ್ಟ್ ಮಾಡಲಾಗಿದೆ.

ಆರೋಪಿ ಶಾರಿಕ್ ಗೆ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆ ವೈದ್ಯರ ಸಲಹೆಯಂತೆ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಶನಿವಾರ ಬೆಳಗ್ಗೆ 6 ಗಂಟೆಗೆ ಬಿಗಿ ಭದ್ರತೆಯಲ್ಲಿ ಆತನನ್ನು ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ದೃಢಪಡಿಸಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ: ನವೆಂಬರ್ 19 ರಂದು ಮಂಗಳೂರಿನ ಗರೋಡಿಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಉಗ್ರ ಶಾರಿಕ್ ಕೈಯಲ್ಲಿದ್ದ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಇದರಿಂದ ಗಾಯಗೊಂಡಿದ್ದ ಆರೋಪಿ ಶಾರಿಕ್ ಮತ್ತು ರಿಕ್ಷಾ ಚಾಲಕ ಪುರುಷೋತ್ತಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಕೇಂದ್ರ ಸರ್ಕಾರ ಎನ್ ಐ ಎ ಗೆ ಹಸ್ತಾಂತರಿಸಿದೆ. ಇದೀಗ ಎನ್ ಐ ಎ ತನಿಖೆ ನಡೆಸುತ್ತಿದೆ.

ಇದನ್ನೂಓದಿ:ಹಲ್ಲೆ ಪ್ರಕರಣ: ಹೊತ್ತಿ ಉರಿದ ಟಿಡಿಪಿ ಮುಖಂಡರ ಮನೆ.. ಪಲ್ನಾಡು ಉದ್ವಿಗ್ನ

Last Updated :Dec 17, 2022, 3:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.