ETV Bharat / state

ಸಿಲಿಂಡರ್​ ಸೋರಿಕೆಯಾಗಿ ಬೆಂಕಿ ಅನಾಹುತ : ಪವಾಡ ಸದೃಶ ರೀತಿಯಲ್ಲಿ ಪಾರಾದ ಮನೆಮಂದಿ

author img

By

Published : Jul 31, 2020, 2:13 AM IST

ವಿಟ್ಲ ಕಸಬಾ ಗ್ರಾಮದ ಉಕ್ಕುಡ ದರ್ಬೆಯಲ್ಲಿನ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ. ಪರಿಣಾಮ ಮನೆಯಲ್ಲಿನ ಕೆಲ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಅಡುಗೆ ಅನಿಲ ಸೋರಿಕೆ
ಅಡುಗೆ ಅನಿಲ ಸೋರಿಕೆ

ಬಂಟ್ವಾಳ: ಸಿಲಿಂಡರ್​ ಅನಿಲ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಭಷ್ಮವಾಗಿದ್ದು, ಪವಾಡ ಸದೃಶ್ಯ ರೀತಿಯಲ್ಲಿ ಮನೆಮಂದಿ ಪಾರಾಗಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಉಕ್ಕುಡ ದರ್ಬೆಯಲ್ಲಿನ ಯೂಸುಪ್ ಎಂಬುವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಸ್ಟವ್​ ಅಳವಡಿಕೆ ಮಾಡಲು ಗ್ಯಾಸ್​ನ ಮುಚ್ಚಳ ತೆಗೆದಾಗ ಅನಿಲ ಸೋರಿಕೆಯಾಗಿದೆ. ಬಳಿಕ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಿಂದ ಮನೆಯ ವಿದ್ಯುತ್ ಸಂಪರ್ಕ ಹಾಗೂ ಇತರೆ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.