ETV Bharat / state

ಭಿನ್ನಕೋಮಿನ ಜೋಡಿ ಮೇಲೆ ನೈತಿಕ ಪೊಲೀಸ್​​ಗಿರಿ: ನಾಲ್ವರು ಭಜರಂಗದಳ ಕಾರ್ಯಕರ್ತರ ಬಂಧನ

author img

By

Published : Apr 2, 2021, 11:59 PM IST

four-bajrang-dal-activists-arrested-in-moral-policing-case
ನೈತಿಕ ಪೊಲೀಸ್​​ಗಿರಿ

ಬಸ್​ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಭಿನ್ನಕೋಮಿನ ಜೋಡಿಯನ್ನು ತಡೆದು ನೈತಿಕ ಪೊಲೀಸ್​​ಗಿರಿ ನಡೆಸಿದ ನಾಲ್ವರು ಭಜರಂಗದಳ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ಖಾಸಗಿ ಬಸ್​ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಭಿನ್ನಕೋಮಿನ ಜೋಡಿಯನ್ನು ತಡೆದು ನೈತಿಕ ಪೊಲೀಸ್​​ಗಿರಿ ನಡೆಸಿದ ನಾಲ್ವರು ಭಜರಂಗದಳ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಅತ್ತಾವರದ ಬಾಲಚಂದ್ರ (28), ಕಂದುಕದ ಧನುಷ್ ಭಂಡಾರಿ (25), ಶಕ್ತಿನಗರದ ಜಯಪ್ರಶಾಂತ್ (27) ಮತ್ತು ಉರ್ವಮಾರಿಗುಡಿ ಕ್ರಾಸ್ ರೋಡ್ ಬಳಿಯ ಅನಿಲ್ ಕುಮಾರ್ (27) ಬಂಧಿತರು. ಇವರ ಮೇಲೆ ಈ ಹಿಂದೆಯು ವಿವಿಧ ಠಾಣೆಗಳಲ್ಲಿ ಅಪರಾಧ ಪ್ರಕರಣ ದಾಖಲಾಗಿತ್ತು.

ಘಟನೆಯ ಹಿನ್ನೆಲೆ:

ಮಂಗಳೂರು ಕೆಎಸ್​ಆರ್​​ಟಿಸಿ ಬಸ್ ನಿಲ್ದಾಣದ ಬಳಿಯಿಂದ ಹೊರಟ ಖಾಸಗಿ ಬಸ್​ನಲ್ಲಿ ಭಿನ್ನ ಕೋಮಿನ ಯುವಕ ಮತ್ತು ಯುವತಿ ಜೊತೆಯಾಗಿ ಪ್ರಯಾಣಿಸುತ್ತಿರುವ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ನಗರದ ಪಂಪ್ವೆ​ಲ್​ ಬಳಿ ಬಸ್ ತಡೆದು ಇಬ್ಬರನ್ನೂ ಬಸ್​​ನಿಂ​​ದ ಕೆಳಗಿಳಿಸಿ ಹಲ್ಲೆ ನಡೆಸಿದ್ದರು. ಈ ವೇಳೆ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು, ಆತನನ್ನು ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ನಡೆದ ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದರು.

ಇದನ್ನೂ ಓದಿ : ಮನೆ ಮುಂದೆ ಸಿಗರೇಟ್‌ ಸೇದಬೇಡ ಎಂದಿದ್ದಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.