ETV Bharat / state

ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು

author img

By

Published : Sep 16, 2022, 11:07 AM IST

ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾನೆ.

Harshit granted bail  Harshit granted bail in Fazil murder case  Fazil murder case  ಫಾಜಿಲ್ ಹತ್ಯೆ ಪ್ರಕರಣ  ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು  ಸುರತ್ಕಲ್​ನ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣ  ಬಂಟ್ವಾಳದ ಹರ್ಷಿತ್‌ಗೆ ನ್ಯಾಯಾಲಯದಿಂದ ಜಾಮೀನು
ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು

ಮಂಗಳೂರು: ಸುರತ್ಕಲ್​ನ ಮಂಗಳಪೇಟೆಯ ಫಾಝಿಲ್ ಎಂಬಾತನ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ ಬಂಟ್ವಾಳದ ಹರ್ಷಿತ್‌ಗೆ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಗಳು ಆತಂಕ ಸೃಷ್ಟಿಸಿದ್ದವು. ಈ ಪೈಕಿ ಜುಲೈ 28 ರಂದು ನಡೆದ ಫಾಝಿಲ್ ಹತ್ಯೆ ಪ್ರಕರಣವೂ ಒಂದಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ ಇವರಿಗೆ ಆಶ್ರಯ ನೀಡಿದ ಬಂಟ್ವಾಳದ ಹರ್ಷಿತ್​ನನ್ನೂ ಸಹ ಬಂಧಿಸಲಾಗಿತ್ತು.

ಹರ್ಷಿತ್ ಆರೋಪಿಗಳನ್ನು ಮನೆಗೆ ಕರೆದುಕೊಂಡು ಹೋಗಿ ಉಳಿದುಕೊಳ್ಳಲು ಆಶ್ರಯ ನೀಡಿದ್ದನು. ಪೊಲೀಸರು ಆತನನ್ನು ಆಗಸ್ಟ್​ 17 ರಂದು ಬಂಧಿಸಿದ್ದರು. ಹರ್ಷಿತ್​ ಜಾಮೀನಿಗಾಗಿ ಕೋರ್ಟ್​ಗೆ ಮೊರೆ ಹೋಗಿದ್ದು ಪ್ರಕರಣದ ವಿಚಾರಣೆ ನಡೆಸಿದ 3ನೇ ಜಿಲ್ಲಾ ಸತ್ರ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿದೆ. ಸೆ.13ರಂದು ಜೈಲಿನಿಂದ ಆತ ಬಿಡುಗಡೆಗೊಂಡಿದ್ದಾನೆ.

ಜುಲೈ 28ರಂದು ರಾತ್ರಿ ಮುಹಮ್ಮದ್ ಫಾಝಿಲ್ ಸುರತ್ಕಲ್​ನ ಮೂಡ ಮಾರುಕಟ್ಟೆಯಲ್ಲಿರುವ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನನ್ನು ಭೇಟಿ ಮಾಡಿದ್ದ. ಬಳಿಕ ಅಂಗಡಿಯಿಂದ ಹೊರ‌ಬರುತ್ತಿದ್ದಂತೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೈಗೈದಿತ್ತು.

ಇದನ್ನೂ ಓದಿ: ಸುರತ್ಕಲ್ ಫಾಜಿಲ್​ ಕೊಲೆ ಪ್ರಕರಣ: ಏಳು ಮಂದಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.