ಮಂಗಳೂರು: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ನೀಡುವ ವೇಳೆ ಯ ಸಂಭಾಷಣೆಯ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರು ನಿನ್ನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೃಹ ಸಚಿವರನ್ನು ಭೇಟಿಯಾಗಿ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಎನ್ಐಎ ತನಿಖೆ ನಡೆಸಬೇಕು. ಎಸ್ಡಿಪಿಐಯನ್ನು ನಿಷೇಧಿಸಬೇಕು ಎಂದು ಮನವಿಯನ್ನು ಸಲ್ಲಿಸಿದ್ದರು. ಇದರ 7 ಸೆಕೆಂಡ್ ವಿಡಿಯೋವನ್ನು ವಿಎಚ್ಪಿ ಮಾಧ್ಯಮ ವಿಭಾಗ ಗ್ರೂಪಿನಲ್ಲಿ ಹಂಚಿಕೊಂಡಿತ್ತು. ಈ ವಿಡಿಯೋದಲ್ಲಿ ಗೃಹಸಚಿವರು ಶರಣ್ ಪಂಪ್ ವೆಲ್ ಅವರಿಗೆ ಹೇಳಿದ ಮಾತು ಎಲ್ಲೆಡೆ ಈಗ ಸದ್ದು ಮಾಡುತ್ತಿದೆ.
ನಿಮ್ಮ ಮೇಲೆ ಯಾವುದೇ ಕೇಸ್ ಹಾಕಿದ್ರೂ ತೆಗೆದುಹಾಕ್ತೀವಿ ಎಂದು ಗೃಹಸಚಿವರು ವಿಎಚ್ಪಿ ಮುಖಂಡ ಶರಣ್ ಪಂಪ್ ವೆಲ್ಗೆ ಹೇಳುತ್ತಿರುವುದು ಈ ವಿಡಿಯೋದಲ್ಲಿದೆ.