ಮಂಗಳೂರು: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳನ್ನು ಗುರುತಿಸಿ ತಕ್ಷಣ ಪರಿಹಾರ ನೀಡುವಂತೆ ಕಂದಾಯ ಸಚಿವ ಆರ್.ಅಶೋಕ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ದ.ಕ. ಜಿ.ಪಂನಲ್ಲಿ ಮಳೆ ಹಾನಿಯ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ., ಅರ್ಧದಷ್ಟು ಮನೆ ಹಾನಿಗೆ 3 ಲಕ್ಷ ರೂ. ಹಾಗೂ ಭಾಗಶಃ ಮನೆ ಹಾನಿಯಾಗಿದ್ದಲ್ಲಿ 50 ಸಾವಿರ ರೂ. ಪರಿಹಾರವನ್ನು ಎನ್ಡಿಆರ್ಎಫ್ನಿಂದ ನೀಡಲಾಗುತ್ತದೆ ಎಂದರು.
ಇದೇ ವೇಳೆ, ಮಳೆ ಹಾನಿ ಪರಿಹಾರವನ್ನು ಸ್ವಲ್ಪ ಉದಾರವಾಗಿ ಲೆಕ್ಕಾಚಾರ ಮಾಡಿ ಎಂದು ಡಿಸಿಗೆ ಹೇಳಿದರು. ಸಚಿವರ ಸಭೆಗೆ ಗೈರು ಹಾಜರಾಗಿದ್ದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆಯೂ ಜಿಲ್ಲಾಧಿಕಾರಿಗೆ ಸೂಚಿಸಿದರು.
ಇದನ್ನೂ ಓದಿ: ಭಾರಿ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು